ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆಗೆ ವಿರೋಧ; ಶಾಲೆ ತೊರೆಯಲುಮುಂದಾದ 80 ವಿದ್ಯಾರ್ಥಿಗಳು

62
ಮಂಡ್ಯ: ಮಧ್ಯಾಹ್ನದ ಬಿಸಿ ಊಟದ ಯೋಜನೆ ಹಿನ್ನೆಲೆಯಲ್ಲಿ ದೇವಾಲಯದ ಪಕ್ಕದಲ್ಲಿರುವ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ಮೊಟ್ಟೆ ಬೇಯಿಸುತ್ತಿರುವುದರಿಂದ ಶಾಲೆ ತೊರೆಯವುದಾಗಿ 80 ವಿದ್ಯಾರ್ಥಿಗಳು ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಆಲಕೆರೆ ಗ್ರಾಮದಲ್ಲಿ ನಡೆದಿದೆ.


ಮೊಟ್ಟೆ ನೀಡುವ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದು ದೀರ್ಘಕಾಲದಿಂದ ಅನುಸರಿಸಿಕೊಂಡು ಬಂದಿರುವ ಧಾರ್ಮಿಕ ನಿಯಮಗಳ ಉಲ್ಲಂಘನೆ ಎಂದು ಹೇಳಿದ್ದಾರೆ.

ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಶಾಲೆ ಇದ್ದು, ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ಬೇಯಿಸುವುದು ಅವರ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ಗ್ರಾಮಸ್ಥರು ವಾದಿಸಿದ್ದಾರೆ.

ದೇವಾಲಯದ ಆವರಣದ ಬಳಿ ಮಾಂಸ ಅಥವಾ ಮೊಟ್ಟೆಗಳನ್ನು ನಿಷೇಧಿಸಲಾಗಿದೆ. ಶಾಲೆಯ 120 ವಿದ್ಯಾರ್ಥಿಗಳ ಪೈಕಿ 80 ವಿದ್ಯಾರ್ಥಿಗಳು ಈಗ ಮೊಟ್ಟೆಗಳನ್ನು ಪಡೆಯುತ್ತಿಲ್ಲ.

ಶಾಲೆ ಆವರಣದಲ್ಲಿ ಮೊಟ್ಟೆಗಳನ್ನು ಬೇಯಿಸುವುದನ್ನು ಮುಂದುವರಿಸಿದರೆ, ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸುವುದಾಗಿ ಪೋಷಕರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಹಲವು ಮಂದಿ ವರ್ಗಾವಣೆ ಪ್ರಮಾಣಪತ್ರಗಳನ್ನು (TCs) ಕೋರಿದ್ದಾರೆ.

ನಮ್ಮ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿ ಶಾಲೆ ಆವರಣದಲ್ಲಿ ಮೊಟ್ಟೆಗಳನ್ನು ಬೇಯಿಸುತ್ತಿರುವ ಕಾರಣ ನಾವು ನಮ್ಮ ಮಕ್ಕಳಿಗೆ ಟಿಸಿ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಪೋಷಕರೊಬ್ಬರು ಹೇಳಿದರು. ಸರ್ಕಾರದ ನೀತಿಯನ್ನು ಸರ್ಕಾರ ಶಾಲೆ ಅನುಸರಿಸುತ್ತಿದ್ದು, ಪೋಷಕರು ತಮ್ಮ ಬೇಡಿಕೆಯನ್ನು ಪುನರ್ ಪರಿಶೀಲಿಸಬೇಕು ಎಂದು ಶಾಲೆಯ ಪ್ರಾಂಶುಪಾಲರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ, ಶಿಕ್ಷಣ ಇಲಾಖೆ, ಶಾಲಾ ಮುಖ್ಯಸ್ಥರು, ಪೋಷಕರೊಂದಿಗೆ ಸಭೆ ಕರೆದಿದ್ದು, ಈ ಬಗ್ಗೆ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...