ಕೆಲವು ದಿನಗಳಲ್ಲಿ ನಿವೃತ್ತಿ ಹೊಂದಲಿರುವ ಎನ್ಕೌಂಟರ್ ಸ್ಪೆಷಲಿಸ್ಟ್ ಪೊಲೀಸ್ ಅಧಿಕಾರಿ ದಯಾ ನಾಯಕ್

114

ಮುಂಬೈ ಪೊಲೀಸ್ ಇಲಾಖೆ ಸೇರಿದ ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಸಂಚಲನ ಮೂಡಿಸಿದ್ದ ಕನ್ನಡಿಗ ಪೋಲಿಸ್ ಅಧಿಕಾರಿ ದಯಾ ನಾಯಕ್ ಮೂವತ್ತು ವರ್ಷಗಳ ಸೇವೆಯ ನಂತರ ಈ ತಿಂಗಳ ಅಂತ್ಯಕ್ಕೆ ವೃತ್ತಿಯಿಂದ ನಿವೃತ್ತರಾಗಲಿದ್ದಾರೆ.

1995ರಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಗೆ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರ್ಪಡೆಗೊಂಡ ದಯಾನಾಯಕ್, ಇದೀಗ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಹುದ್ದೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಮುಂಬೈ ಅಂಡರ್ ವರ್ಲ್ಡ್‌ನ ಪಾಪಿಗಳ ಲೋಕಕ್ಕೆ ಪೊಲೀಸ್ ಪವರ್ ಏನೆಂಬುದನ್ನು ತೋರಿಸಿಕೊಟ್ಟವರು. ‘ಮುಂಬೈ ಮೇ ಅಬ್ ಗ್ಯಾಂಗ್‌ಸ್ಟ‌ರ್ ಲೋಗೋಂಕ ರಾಜ್ ನಹಿ ಚಲೇಗಾ” (ಮುಂಬೈನಲ್ಲಿ ಇನ್ನೂ ಗ್ಯಾಂಗ್‌ಸ್ಟರ್‌ಗಳ ಕಾರುಬಾರು ನಡೆಯುವುದಿಲ್ಲ) ಎಂಬುದನ್ನು ಸಾಬೀತುಪಡಿಸಿದವರು.

ಲಷ್ಕರ್ ಇ ತೋಯ್ದಾ ಭಯೋತ್ಪಾದನೆ ಸಂಘಟನೆಯ ಸದಸ್ಯರ ಸಹಿತ ಕುಖ್ಯಾತ ಗ್ಯಾಂಗ್‌ಸ್ಟರ್‌ಗಳಾದ ದಾವುದ್ ಇಬ್ರಾಹಿಂ, ಛೋಟಾ ಶಕೀಲ್, ಚೋಟಾ ರಾಜನ್, ಅಬು ಸಲಿಂ ಅರುಣ್ ಗೌಳಿ, ರವಿ ಪೂಜಾರಿ ಗ್ಯಾಂಗ್‌ನ ಸುಮಾರು 85 ಜನರನ್ನು ಎನ್‌ಕೌಂಟರ್ ಮಾಡುವ ಮೂಲಕ ದೇಶಾದ್ಯಂತ ಸುದ್ದಿ ಮಾಡಿದವರು.

ಹುಟ್ಟೂರು ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಸರಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಿದ ದಯಾನಾಯಕ್, ಸಾವಿರಾರು ಮಕ್ಕಳ ಭವಿಷ್ಯ ರೂಪಿಸಲು ನೆರವಾಗಿದ್ದರು.

ವೃತ್ತಿ ಜೀವನದ ಆರಂಭದ ದಿನಗಳಿಂದಲೇ ದಯಾನಾಯಕ್ ತಮ್ಮದೊಂದು ವೈಶಿಷ್ಟ್ಯವನ್ನು ಉಳಿಸಿ ಬೆಳೆಸಿಕೊಂಡು ಬಂದವರು. ಭಾರತದ ಅತ್ಯುನ್ನತ ಬೇಹುಗಾರಿಕಾ ಸಂಸ್ಥೆ ‘ರಾ’ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಕಾರ್ಯಾಚರಣೆಗೂ ಸಹಕಾರ ನೀಡಿದವರು.

ವೃತ್ತಿಜೀವನದಲ್ಲಿ ಬಂದ ಸೋಲನ್ನು, ಅನುಭವಿಸಿದ ಅವಮಾನವನ್ನು ಒಂದು ಕೈಯಿಂದ ಆಚೆಗೆ ದೂಡುತ್ತಲೇ ವಿಜಯದ ಯಾತ್ರೆಯನ್ನು ಕೈಗೊಂಡ ಅವರು ನಿಂದಕರ ಕಡೆ ಯಾವತ್ತೂ ತಿರು-ಗಿಯೂ ನೋಡಿದವರಲ್ಲ. ಕೊಟ್ಟ ಮಾತು, ಇಟ್ಟ ಹೆಜ್ಜೆಯಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...