ಪಡ್ರೆ ಧೂಮಾವತಿ ದೈವಸ್ಥಾನದ ಚಿನ್ನಾಭರಣ ಹಾಗೂಹಣ,ಕಳ್ಳತನ ಸತೀಶ್ ಮುಂಚೂರುವಿರುದ್ಧ ಪ್ರಕರಣ ದಾಖಲು

86

ಮಂಗಳೂರು: ಸುರತ್ಕಲ್ ನ  ಸತೀಶ್ ಮುಂಚೂರು ಮತ್ತು ಇತರರ ವಿರುದ್ದ ಪಡ್ರೆ ಧೂಮವತಿ ದೈವಸ್ಥಾನದ ಬಂಗಾರ ಮತ್ತು ಹಣ ಕಳ್ಳತನ ಮಾಡಿದ ದೂರು ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸತೀಶ್ ಮುಂಚೂರು ಮತ್ತು ಲೋಕಾಯುಕ್ತ ಡಿವೈಎಸ್ ಪಿ ದಿನಕರ್ ಶೆಟ್ಟಿ ಸೇರಿದಂತೆ ಇತರರು ಸುರತ್ಕಲ್ ಪಡ್ರೆ ಜುಮಾದಿ ದೈವಸ್ಥಾನಕ್ಕೆ ನುಗ್ಗಿ ಭಕ್ತರಿಂದ ಸಂಗ್ರಹವಾದ ಹಣ, ಚಿನ್ನ, ಬೆಳ್ಳಿಯನ್ನು ಕಳ್ಳತನ ಮಾಡಿ ಬಳಕೆ ಮಾಡಿದ್ದಾರೆ ಎಂದು ಪಡ್ರೆ ಜುಮಾದಿ ದೈವಸ್ಥಾನದ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿಯವರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ನ್ಯಾಯಾಲಯದ ನಿರ್ದೇಶನದಂತೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸತೀಶ್ ಮುಂಚೂರು ಮತ್ತು ಲೋಕಾಯುಕ್ತ ಡಿವೈಎಸ್ ಪಿ ದಿನಕರ್ ಶೆಟ್ಟಿ ಸೇರಿದಂತೆ ಇತರರು ಸುರತ್ಕಲ್ ಪಡ್ರೆ ಜುಮಾದಿ ದೈವಸ್ಥಾನಕ್ಕೆ ನುಗ್ಗಿ ಭಕ್ತರಿಂದ ಸಂಗ್ರಹವಾದ ಹಣ, ಚಿನ್ನ, ಬೆಳ್ಳಿಯನ್ನು ಕಳ್ಳತನ ಮಾಡಿ ಬಳಕೆ ಮಾಡಿದ್ದಾರೆ ಎಂದು ಪಡ್ರೆ ಜುಮಾದಿ ದೈವಸ್ಥಾನದ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿಯವರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ನ್ಯಾಯಾಲಯದ ನಿರ್ದೇಶನದಂತೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಫ್ಐಆರ್ ನಲ್ಲಿ, ಪೊಲೀಸ್ ಲೋಕಾಯುಕ್ತ ಡಿವೈಎಸ್ ಪಿ ಅಧಿಕಾರಿಯಾಗಿರುವ ದಿನಕರ್ ಶೆಟ್ಟಿ, ಬಾಬು ಭಂಡಾರಿ, ಲೋಕಯ್ಯ ಶೆಟ್ಟಿ, ಯೋಗೀಶ್ ಕೊಂಕಣಬೈಲ್, ಅಪೇಕ್ಷ ಶೆಟ್ಟಿ, ರವಿರಾಜ್ ಸುವರ್ಣ, ರಮಾನಾಥ್ ಅಮೀನ್, ಲತೀಶ್ ಶೆಟ್ಟಿ, ಮುಖೇಶ್ ಶೆಟ್ಟಿ, ಸ್ವಪ್ನ, ಸುನೀಲ್, ಸತೀಶ್ ಮುಂಚೂರು, ರಾಜೇಶ್ ರವರುಗಳನ್ನು ಪಡ್ರೆ ದೈವಸ್ಥಾನದ ಹಣ, ಬಂಗಾರ ಕಳ್ಳತನದ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ದ ಬಿಎನ್ ಎಸ್ 303, 314, 316, 318, 319, 336, 315 ಸೆಕ್ಷನ್ ಗಳಡಿಯಲ್ಲಿ ಕ್ರೈಂ ನಂಬರ್ 94/2025 ದಾಖಲಾಗಿದೆ. ಸುರತ್ಕಲ್ ನ ಪಡ್ರೆ ಜುಮಾದಿ ದೈವಸ್ಥಾನವು ಇತಿಹಾಸ ಪ್ರಸಿದ್ದ ದೇಗುಲವಾಗಿದೆ. ಈ ದೈವಸ್ಥಾನದ ನಿರ್ವಹಣೆಗೆ ಆಡಳಿತ ಸಮಿತಿ ಇದೆ.

ಆಡಳಿತ ಸಮಿತಿಯಲ್ಲಿ ಪೂರ್ಣಪ್ರಮಾಣದ ಸದಸ್ಯರಿದ್ದು, ದೈವಸ್ಥಾನಕ್ಕೆ ಬಂದ ಹಣ, ಚಿನ್ನ, ಬೆಳ್ಳಿಯನ್ನು ಯೂನಿಯನ್ ಬ್ಯಾಂಕ್ ನ ಲಾಕರ್‌ನಲ್ಲಿ ಇಡಲಾಗುತ್ತದೆ. ಪಡ್ರೆ ಜುಮಾದಿ ದೈವಸ್ಥಾನದ 2025 ರ ವಾರ್ಷಿಕ ಜಾತ್ರೆಯು ಮಾರ್ಚ್ 13 ರಿಂದ 15 ರ ತನಕ ನಡೆದಿತ್ತು. ಈ ವೇಳೆ ಜುಮಾದಿ ದೈವದ ಹಣ, ಚಿನ್ನ, ಬೆಳ್ಳಿಯನ್ನು ಲಾಕರ್ ನಿಂದ ತೆಗೆದು ದೈವಸ್ಥಾನಕ್ಕೆ ತರಲಾಗಿತ್ತು.

ಈ ರೀತಿ ದೈವಸ್ಥಾನಕ್ಕೆ ತಂದ ಜುಮಾದಿ ದೈವದ ಚಿನ್ನ, ಬೆಳ್ಳಿಯನ್ನು ಆರೋಪಿಗಳಾದ ದಿನಕರ್ ಶೆಟ್ಟಿ,  ಸತೀಶ್ ಮುಂಚೂರು ಮತ್ತು ಇತರರು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡು, ಬ್ಯಾಂಕ್ ಲಾಕರ್ ಗೆ ಜಮಾ ಮಾಡದೇ ವಂಚಿಸಿದ್ದಾರೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.

ದೈವಸ್ಥಾನದ ಆಡಳಿತ ಮಂಡಳಿಯ ವಿವಾದ ಸಿವಿಲ್ ನ್ಯಾಯಾಲಯದಲ್ಲಿ ಓ.ಎಸ್ ನಂ. 1171/2024 ಮತ್ತು ಒಎಸ್ 452/2025 ವಿಚಾರಣೆಯಲ್ಲಿದೆ. ಒಎಸ್ ಸಿವಿಲ್ ಕೇಸ್ ವಿಚಾರಣೆಯಲ್ಲಿ ಇರುವಾಗ ಹೊಸ ಸಮಿತಿ ರಚನೆ ಮಾಡಬಾರದು ಎಂದು ಆದೇಶವಿದ್ದರೂ ದಿನಕರ್ ಶೆಟ್ಟಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡು, ಊರು ಮತ್ತು ದೈವಸ್ಥಾನಕ್ಕೆ ಸಂಬಂಧಪಡದ ಸತೀಶ್ ಮುಂಚೂರು ಎಂಬಾತನ ಜೊತೆ ಸೇರಿಕೊಂಡು ಹಣ, ಚಿನ್ನಾಭರಣ ಲಪಟಾಯಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಎಫ್ಐಆರ್ ನಲ್ಲಿ, ಪೊಲೀಸ್ ಲೋಕಾಯುಕ್ತ ಡಿವೈಎಸ್ ಪಿ ಅಧಿಕಾರಿಯಾಗಿರುವ ದಿನಕರ್ ಶೆಟ್ಟಿ, ಬಾಬು ಭಂಡಾರಿ, ಲೋಕಯ್ಯ ಶೆಟ್ಟಿ, ಯೋಗೀಶ್ ಕೊಂಕಣಬೈಲ್, ಅಪೇಕ್ಷ ಶೆಟ್ಟಿ, ರವಿರಾಜ್ ಸುವರ್ಣ, ರಮಾನಾಥ್ ಅಮೀನ್, ಲತೀಶ್ ಶೆಟ್ಟಿ, ಮುಖೇಶ್ ಶೆಟ್ಟಿ, ಸ್ವಪ್ನ, ಸುನೀಲ್, ಸತೀಶ್ ಮುಂಚೂರು, ರಾಜೇಶ್ ರವರುಗಳನ್ನು ಪಡ್ರೆ ದೈವಸ್ಥಾನದ ಹಣ, ಬಂಗಾರ ಕಳ್ಳತನದ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ದ ಬಿಎನ್ ಎಸ್ 303, 314, 316, 318, 319, 336, 315 ಸೆಕ್ಷನ್ ಗಳಡಿಯಲ್ಲಿ ಕ್ರೈಂ ನಂಬರ್ 94/2025 ದಾಖಲಾಗಿದೆ. ಸುರತ್ಕಲ್ ನ ಪಡ್ರೆ ಜುಮಾದಿ ದೈವಸ್ಥಾನವು ಇತಿಹಾಸ ಪ್ರಸಿದ್ದ ದೇಗುಲವಾಗಿದೆ. ಈ ದೈವಸ್ಥಾನದ ನಿರ್ವಹಣೆಗೆ ಆಡಳಿತ ಸಮಿತಿ ಇದೆ.

ಆಡಳಿತ ಸಮಿತಿಯಲ್ಲಿ ಪೂರ್ಣಪ್ರಮಾಣದ ಸದಸ್ಯರಿದ್ದು, ದೈವಸ್ಥಾನಕ್ಕೆ ಬಂದ ಹಣ, ಚಿನ್ನ, ಬೆಳ್ಳಿಯನ್ನು ಯೂನಿಯನ್ ಬ್ಯಾಂಕ್ ನ ಲಾಕರ್‌ನಲ್ಲಿ ಇಡಲಾಗುತ್ತದೆ. ಪಡ್ರೆ ಜುಮಾದಿ ದೈವಸ್ಥಾನದ 2025 ರ ವಾರ್ಷಿಕ ಜಾತ್ರೆಯು ಮಾರ್ಚ್ 13 ರಿಂದ 15 ರ ತನಕ ನಡೆದಿತ್ತು. ಈ ವೇಳೆ ಜುಮಾದಿ ದೈವದ ಹಣ, ಚಿನ್ನ, ಬೆಳ್ಳಿಯನ್ನು ಲಾಕರ್ ನಿಂದ ತೆಗೆದು ದೈವಸ್ಥಾನಕ್ಕೆ ತರಲಾಗಿತ್ತು.

ಈ ರೀತಿ ದೈವಸ್ಥಾನಕ್ಕೆ ತಂದ ಜುಮಾದಿ ದೈವದ ಚಿನ್ನ, ಬೆಳ್ಳಿಯನ್ನು ಆರೋಪಿಗಳಾದ ದಿನಕರ್ ಶೆಟ್ಟಿ,  ಸತೀಶ್ ಮುಂಚೂರು ಮತ್ತು ಇತರರು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡು, ಬ್ಯಾಂಕ್ ಲಾಕರ್ ಗೆ ಜಮಾ ಮಾಡದೇ ವಂಚಿಸಿದ್ದಾರೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.

ದೈವಸ್ಥಾನದ ಆಡಳಿತ ಮಂಡಳಿಯ ವಿವಾದ ಸಿವಿಲ್ ನ್ಯಾಯಾಲಯದಲ್ಲಿ ಓ.ಎಸ್ ನಂ. 1171/2024 ಮತ್ತು ಒಎಸ್ 452/2025 ವಿಚಾರಣೆಯಲ್ಲಿದೆ. ಒಎಸ್ ಸಿವಿಲ್ ಕೇಸ್ ವಿಚಾರಣೆಯಲ್ಲಿ ಇರುವಾಗ ಹೊಸ ಸಮಿತಿ ರಚನೆ ಮಾಡಬಾರದು ಎಂದು ಆದೇಶವಿದ್ದರೂ ದಿನಕರ್ ಶೆಟ್ಟಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡು, ಊರು ಮತ್ತು ದೈವಸ್ಥಾನಕ್ಕೆ ಸಂಬಂಧಪಡದ ಸತೀಶ್ ಮುಂಚೂರು ಎಂಬಾತನ ಜೊತೆ ಸೇರಿಕೊಂಡು ಹಣ, ಚಿನ್ನಾಭರಣ ಲಪಟಾಯಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಹಿಂದುತ್ವ ನಾಯಕ ಎಂದು ಹೇಳಿಕೊಳ್ಳುವ ಸತೀಶ್ ಮುಂಚೂರು, ದಿನಕರ್ ಶೆಟ್ಟಿ ಮತ್ತು ಇತರರು ಪಡ್ರೆ ಜುಮಾದಿಗೆ ಸೇರಿದ ಅಂದಾಜು 8 ಲಕ್ಷ ರೂಗಳು, ಸುಮಾರು 15 ಪವನ್ ಚಿನ್ನವನ್ನು ಲಪಟಾಯಿಸಿದ್ದಾರೆ ಎಂದು ಎಫ್ಐಆರ್ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...