ಮಹಿಳೆಗೆ ಜಾತಿನಿಂದನೆ ಚೇರ್ಕಾಡಿ ಪಂಚಾಯತ್ ಪಿಡಿಓ ವಿರುದ್ಧ ಪ್ರಕರಣ ದಾಖಲು

53
ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ವರ್ಷಗಳ ಕೆಳಗೆ ಅವೈಜ್ಞಾನಿಕವಾಗಿ ಕಾಂಕ್ರೀಟ್‌ ರಸ್ತೆ ಮಾಡಿದ್ದರಿಂದ ಮಳೆಗಾಲದಲ್ಲಿ ಮೇಲ್ಭಾಗದ ಚರಂಡಿ ಹಾಗೂ ರಸ್ತೆ ನೀರು ನುಗ್ಗಿ ಅವಾಂತರ ಪ್ರಶ್ನಿಸಿದ ಮಹಿಳೆ ಮೇಲೆಚೇರ್ಕಾಡಿ ಪಿಡಿಓ ಸುಭಾಸ್  ಜಾತಿ ನಿಂದನೆ ಗೈದ ಬಗ್ಗೆ  ಪ್ರಕರಣ ದಾಖಲಾಗಿದೆ

ಶ್ರೀಮತಿ ವನಿತಾ ಚೇರ್ಕಾಡಿ ಗ್ರಾಮ ಬ್ರಹ್ಮಾವರ ಇವರ ಹೈನುಗಾರಿಕ ಘಟಕಕ್ಕೆ ನುಗ್ಗಿದ ಪರಿಣಾಮ ವನಿತಾರಿಗೆ ನಷ್ಟ ಉಂಟಾಗಿದ್ದು, ಈ ಬಗ್ಗೆ ಅವರು ಚೇರ್ಕಾಡಿ ಗ್ರಾಮ ಪಂಚಾಯತ್‌ ಪಿ.ಡಿ.ಓ ಸುಭಾಸ್‌ ಇವರಲ್ಲಿ ಅರ್ಜಿ ನೀಡಿರುತ್ತಾರೆ ಎನ್ನಲಾಗಿದೆ


ಪಿ ಡಿ ಓ ಸುಭಾಸ್  ವನಿತಾರ ಅರ್ಜಿಗೆ ಸ್ಪಂದಿಸದೇ ಇದ್ದು, ಈ ಬಾರಿಯ ಮಳೆಗಾಲದಲ್ಲಿ ಕೂಡ ನೀರು ಹೈನುಗಾರಿಕ ಘಟಕಕ್ಕೆ ನುಗ್ಗಿ  ನಷ್ಟ ಉಂಟಾಗಿದ್ದು, ದಿನಾಂಕ 25/07/205 ರಂದು ಮದ್ಯಾಹ್ನಾ 1:00 ಗಂಟೆಗೆ ದೂರುದಾರರು ಚೇರ್ಕಾಡಿ ಗ್ರಾಮ ಪಂಚಾಯತ್‌ ಕಛೇರಿಗೆ ಹೋಗಿ ಅರ್ಜಿಯ ಬಗ್ಗೆ ವಿಚಾರಿಸಿದರು

ಸಿಟ್ಟಿಗೆದ್ದ ಪಿ ಡಿ ಓ  ಮಹಿಳೆ ವನಿತಾರನ್ನು ಉದ್ದೇಶಿಸಿ ಪದೇ ಪದೇ ಬಂದು ತಲೆ ತಿನ್ನುತ್ತಿಯಲ್ಲ ಹೊರಗೆ ಹೋಗಿ “ ಎಂದು ಬೆದರಿಸಿ, ಅವಾಚ್ಯ ಶಬ್ದದಿಂದ ಜಾತಿ ಬಗ್ಗೆ ನಿಂದಿಸಿರುವುದಾಗಿ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 157/2025 ಕಲಂ: 351 (2), 352 BNS ಕಲಂ: 3 (1) (r) (s) The SC ST Act ರಂತೆ ಪ್ರಕರಣ ದಾಖಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...