ನಿವೃತ್ತಿಗೂ ಮುನ್ನ ಮುಂಬಯಿ ಪೊಲೀಸ್ ಸಹಾಯಕ ಆಯುಕ್ತರಾಗಿ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಮುಂಬಡ್ತಿ

12

ಮುಂಬೈ ಭೂಗತಲೋಕವನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಖಡಕ್  ಪೊಲೀಸ್ ಅಧಿಕಾರಿ ದಯಾನಾಯಕ್ ಅವರಿಗೆ ಅವರ ಸೇವೆಯನ್ನು ಗುರುತಿಸಿ ಮಹಾರಾಷ್ಟ್ರ ಸರಕಾರ ಪದೋನ್ನತಿ ನೀಡಿ ಗೌರವ ಸಲ್ಲಿಸಿದೆ

ದಯಾ ನಾಯಕ್ ಅವರು ನಾಳೆ ನಿವೃತ್ತರಾಗುತ್ತಿದ್ದು, ಇಂದು  ಅವರನ್ನು ಸಹಾಯಕ ಪೊಲೀಸ್ ಆಯುಕ್ತರನ್ನಾಗಿ ಬಡ್ತಿ ಮುಂಬಡ್ತಿ ನೀಡಲಾಗಿದೆ.

80 ಎನ್ ಕೌಂಟರ್ ಮಾಡಿ ಖ್ಯಾತಿಯ ಜೊತೆ ವಿವಾದಗಳನ್ನೂ ಮೈಮೇಲೆ ಎಳೆದುಕೊಂಡಿದ್ದ ದಯಾ ನಾಯಕ್ ಅವರಿಗೆ ಇದೀಗ ಪದೋನ್ನತಿ ಸಂದರ್ಭದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ

ಮೂಲತ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ತಾಲೂಕಿನ  ಎಣ್ಣೆಹೊಳೆಯವರಾಗಿದ್ದು ತಮ್ಮ  ಹುಟ್ಟೂರಿನಲ್ಲಿ  ಕೊಡುಗೈದಾನಿಯಾಗಿ  ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲಿಲ ನೀಡುತ್ತಾ  ಬರುತ್ತಿರುವ ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ತನ್ನ ವೃತ್ತಿ ಜೀವನದ ಪ್ರಾರಂಭದಿಂದಲೂ ಕೂಡ ಧೈರ್ಯಶಾಲಿಯಾಗಿ ಸಮಾಜಘಾತುಕ ಚಟುವಟಿಕೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಎನ್ಕೌಂಟರ್ ನಡೆಸಿದ್ದರು.ಈ ಬಳಿಕ ಅವರಿಗೆ ಎನ್‌ಕೌಂಟರ್ ದಯಾ ನಾಯಕ್ ಎನ್ನುವ ಹೆಸರು ಬಂದಿತ್ತು.

ಮಹಾರಾಷ್ಟ್ರ ಗೃಹ ಇಲಾಖೆಯ ಆದೇಶದ ಮೇರೆಗೆ ಹಿರಿಯ ಇನ್ಸ್‌ಪೆಕ್ಟರ್‌ಗಳಾದ ಜೀವನ್ ಖರತ್, ದೀಪಕ್ ದಳವಿ ಮತ್ತು ಪಾಂಡುರಂಗ ಪವಾರ್ ಅವರನ್ನು ಸಹ ಎಸಿಪಿಯನ್ನಾಗಿ ಮಾಡಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...