ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ; ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ

63

ಚಿಕ್ಕಮಗಳೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಜೊತೆ ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಸರಿ ಶಾಲು ಧರಿಸಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ.


ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ ಎಂದು ನಯನಾ ಮೋಟಮ್ಮ ಹೇಳಿದರು.

ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು, ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ.

ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ ಎಂದರು. ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ

ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆ ನಂತರ, ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ.

ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಶಾಸಕಿಯಾಗಿಯೂ ನಿಂತಿದ್ದೇನೆ. ಅದನ್ನು ಗುರುತಿಸಿಕೊಳ್ಳಲೇಬೇಕು. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ.

ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ ಎಂದರು. ಯಾರೂ ಕೂಡ ಹುಟ್ಟುವಾಗಲೇ ಇಂತಹ ಜಾತಿ-ಧರ್ಮ, ಹೆಣ್ಣು-ಗಂಡು ಎಂದು ಹುಟ್ಟಿರುವುದಿಲ್ಲ ಎಂದರು”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...