ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

3

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ ಖಾತೆಯನ್ನು ಕಳೆದುಕೊಂಡಿದ್ದಾರೆ.

ಕಳಂಕಿತ ಸಚಿವನ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೊನೆಗೂ ಕ್ರಮ ಕೈಗೊಂಡು ಕೃಷಿ ಸಚಿವರಿಗೆ ಹಿಂಬಡ್ತಿ ನೀಡಿದ್ದಾರೆ.

ಕೊಕಾಟೆ ನಿರ್ವಹಿಸುತ್ತಿದ್ದ ಕೃಷಿ ಖಾತೆಯನ್ನು ಎನ್ಸಿಪಿ ಸಚಿವ ದತ್ತಾತ್ರೇಯ ಭರ್ನೆ ಅವರಿಗೆ ವಹಿಸಲಾಗಿದೆ. ಭರ್ನೆಯವರ ಕ್ರೀಡೆ, ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಫ್ ಖಾತೆ ಕೊಕಾಟೆಗೆ ಲಭ್ಯವಾಗಿದೆ.

ಘಟನೆ ಬಗ್ಗೆ ಕೊಕಾಟೆ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಮತ್ತು ಮುಂದೆ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಮುಂದುವರಿಯಲು ಪವಾರ್ ಸಮ್ಮತಿ ಸೂಚಿಸಿದರು ಎಂದು ಪಕ್ಷದ ಮೂಲಗಳು ಹೇಳಿವೆ.

ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಕೊಕಾಟೆಗೆ ಹಲವು ಬಾರಿ ಪವಾರ್ ಎಚ್ಚರಿಕೆಯನ್ನೂ ನೀಡಿದ್ದರು. ಕೊಕಾಟೆಯವರ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆಗುವ ಹಾನಿಯಿಂದ ರಕ್ಷಿಸಲು ಕೊಕಾಟೆ ವಿರುದ್ಧ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಆಗ್ರಹಿಸಿದ್ದರು ಎಂದು ಸರ್ಕಾರಿ ಮೂಲಗಳು ಹೇಳಿವೆ.

ಮಹಾರಾಷ್ಟ್ರದಲ್ಲಿನ ಕೃಷಿ ಬಿಕ್ಕಟ್ಟಿನ ನಡುವೆ ಕೊಕಾಟೆ ಅವರ ಅಸಂವೇದನಾಶೀಲತೆಯನ್ನು ವಿರೋಧ ಪಕ್ಷದ ನಾಯಕರು ತೀವ್ರವಾಗಿ ಟೀಕಿಸಿದರು . ರಾಜ್ಯದ ರೈತರು ಬಿಕ್ಕಟ್ಟನ್ನು ಎದುರಿಸುತ್ತಿರುವಾಗ, ಕೃಷಿ ಸಚಿವರ ಈ ವರ್ತನೆ ಬೇಜವಾಬ್ದಾರಿಯನ್ನು ಸಹಿಸಲಾಗದು ಎಂದು ಹೇಳಿದ್ದಾರೆ. ಆದರೆ ಮಾಣಿಕ್ರಾವ್ ಈ ಆರೋಪಗಳನ್ನು ನಿರಾಕರಿಸಿದ್ದರು.

ಶಾಸಕಾಂಗ ತನಿಖೆಯಲ್ಲಿ ಅವರು ಸುಮಾರು 18 ರಿಂದ 22 ನಿಮಿಷಗಳ ಕಾಲ ಮೊಬೈಲ್ ಆಟಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಅವರು ಕೇವಲ 10-15 ಸೆಕೆಂಡುಗಳು ಎಂದು ಹೇಳಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...

ನಿವೃತ್ತಿಗೂ ಮುನ್ನ ಮುಂಬಯಿ ಪೊಲೀಸ್ ಸಹಾಯಕ ಆಯುಕ್ತರಾಗಿ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಮುಂಬಡ್ತಿ

ಮುಂಬೈ ಭೂಗತಲೋಕವನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಖಡಕ್  ಪೊಲೀಸ್ ಅಧಿಕಾರಿ ದಯಾನಾಯಕ್ ಅವರಿಗೆ ಅವರ ಸೇವೆಯನ್ನು...