ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

118

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ ಖಾತೆಯನ್ನು ಕಳೆದುಕೊಂಡಿದ್ದಾರೆ.

ಕಳಂಕಿತ ಸಚಿವನ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೊನೆಗೂ ಕ್ರಮ ಕೈಗೊಂಡು ಕೃಷಿ ಸಚಿವರಿಗೆ ಹಿಂಬಡ್ತಿ ನೀಡಿದ್ದಾರೆ.

ಕೊಕಾಟೆ ನಿರ್ವಹಿಸುತ್ತಿದ್ದ ಕೃಷಿ ಖಾತೆಯನ್ನು ಎನ್ಸಿಪಿ ಸಚಿವ ದತ್ತಾತ್ರೇಯ ಭರ್ನೆ ಅವರಿಗೆ ವಹಿಸಲಾಗಿದೆ. ಭರ್ನೆಯವರ ಕ್ರೀಡೆ, ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಫ್ ಖಾತೆ ಕೊಕಾಟೆಗೆ ಲಭ್ಯವಾಗಿದೆ.

ಘಟನೆ ಬಗ್ಗೆ ಕೊಕಾಟೆ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಮತ್ತು ಮುಂದೆ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಮುಂದುವರಿಯಲು ಪವಾರ್ ಸಮ್ಮತಿ ಸೂಚಿಸಿದರು ಎಂದು ಪಕ್ಷದ ಮೂಲಗಳು ಹೇಳಿವೆ.

ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಕೊಕಾಟೆಗೆ ಹಲವು ಬಾರಿ ಪವಾರ್ ಎಚ್ಚರಿಕೆಯನ್ನೂ ನೀಡಿದ್ದರು. ಕೊಕಾಟೆಯವರ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆಗುವ ಹಾನಿಯಿಂದ ರಕ್ಷಿಸಲು ಕೊಕಾಟೆ ವಿರುದ್ಧ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಆಗ್ರಹಿಸಿದ್ದರು ಎಂದು ಸರ್ಕಾರಿ ಮೂಲಗಳು ಹೇಳಿವೆ.

ಮಹಾರಾಷ್ಟ್ರದಲ್ಲಿನ ಕೃಷಿ ಬಿಕ್ಕಟ್ಟಿನ ನಡುವೆ ಕೊಕಾಟೆ ಅವರ ಅಸಂವೇದನಾಶೀಲತೆಯನ್ನು ವಿರೋಧ ಪಕ್ಷದ ನಾಯಕರು ತೀವ್ರವಾಗಿ ಟೀಕಿಸಿದರು . ರಾಜ್ಯದ ರೈತರು ಬಿಕ್ಕಟ್ಟನ್ನು ಎದುರಿಸುತ್ತಿರುವಾಗ, ಕೃಷಿ ಸಚಿವರ ಈ ವರ್ತನೆ ಬೇಜವಾಬ್ದಾರಿಯನ್ನು ಸಹಿಸಲಾಗದು ಎಂದು ಹೇಳಿದ್ದಾರೆ. ಆದರೆ ಮಾಣಿಕ್ರಾವ್ ಈ ಆರೋಪಗಳನ್ನು ನಿರಾಕರಿಸಿದ್ದರು.

ಶಾಸಕಾಂಗ ತನಿಖೆಯಲ್ಲಿ ಅವರು ಸುಮಾರು 18 ರಿಂದ 22 ನಿಮಿಷಗಳ ಕಾಲ ಮೊಬೈಲ್ ಆಟಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ, ಆದರೆ ಅವರು ಕೇವಲ 10-15 ಸೆಕೆಂಡುಗಳು ಎಂದು ಹೇಳಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...