ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

57

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ ಗಂಡ್ರಾ ಸತ್ಯ ನಾರಾಯಣ ಅವರ ಕಚೇರಿಯಲ್ಲಿ ಎಮ್ಮೆಗಳನ್ನು ಕಟ್ಟಿಹಾಕಿ ಆಕ್ರೋಶ ಹೊರಹಾಕಿರುವ ಘಟನೆ ತೆಲಂಗಾಣದ ಹಳ್ಳಿಯೊಂದರಲ್ಲಿ ನಡೆದಿದೆ.

ಯಾವುದೇ ಮುನ್ಸೂಚನೆ ನೀಡದೆ ಎಮ್ಮೆಗಳ ಕೊಟ್ಟಿಗೆಯನ್ನು ಧ್ವಂಸಗೊಳಿಸಲಾಗಿದೆ ಎಂದು ವೆಶಲ್ಲಪಲ್ಲಿ ಗ್ರಾಮದ ಕೂರಕುಲ ಒಡೇಲು ಮತ್ತು ಲಲಿತಾ ಆರೋಪಿಸಿದ್ದಾರೆ.

ಶಾಸಕರು ಹೇಳಿದ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಶೆಡ್ ಧ್ವಂಸ ಮಾಡಿದ್ದಾರೆ. ಶಾಸಕರ ಆದೇಶದ ಮೇರೆಗೆ ತಾವು ಕಾರ್ಯನಿರ್ವಹಿಸಿದ್ದೇವೆ ಎಂದು ಪೋಲೀಸರು ಹೇಳಿದ್ದಾರೆ ಎಂದು ದಂಪತಿ ಹೇಳಿಕೊಂಡರು.

ತಮ್ಮ ಜಾನುವಾರಗಳಿಗೆ ಯಾವುದೇ ಆಶ್ರಯವಿಲ್ಲದೆ ರೊಚ್ಚಿಗೆದ್ದ ದಂಪತಿ ಎಂಎಲ್ಎ ಕಚೇರಿಯ ಹೊರಗೆ ಎಮ್ಮೆಗಳನ್ನು ಕಟ್ಟಿಹಾಕಲು ನಿರ್ಧರಿಸಿದ್ದಾರೆ. ಒಂದು ರೂಪಾಯಿ ತೆಗೆದುಕೊಳ್ಳದೆ ಅವರಿಗೆ ಮತ ಹಾಕಿದ್ದೇವೆ. ಇದು ಅವರು ನಮಗೆ ನೀಡುವ ಪ್ರತಿಫಲವೇ? ದಂಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಹೊಸ ಶೆಡ್ ನಿರ್ಮಿಸುವವರೆಗೆ ಎಮ್ಮೆಗಳನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅದರ ನೀತಿಗಳು ತೆಲಂಗಾಣ ರೈತರನ್ನು ನೋಯಿಸುತ್ತಿದ್ದು, ತೆಲಂಗಾಣದ ಬದಲಿಗೆ ಆಂಧ್ರಪ್ರದೇಶದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...