ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

95

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್‌ ಒಡೆಯರ್‌ ಅವರು ತೀವ್ರವಾಗಿ ಕಿಡಿಕಾರಿದ್ದಾರೆ


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ ಅಣೆಕಟ್ಟೆಗೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.

ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬುದಕ್ಕೆ ಸಾಕ್ಷಿ ಎಲ್ಲಿಯೂ ಇಲ್ಲ. ಸಾಮಾನ್ಯವಾಗಿ ಇತಿಹಾಸದ ಬಗ್ಗೆ ಉಲ್ಲೇಖ ಮಾಡಬೇಕಾದರೆ ಸಾಕ್ಷಿ ಅವಶ್ಯ.


ಅಗತ್ಯಕ್ಕೆ ತಕ್ಕಂತೆ ನಿರೂಪಣೆ ಮಾಡಿಕೊಳ್ಳುವುದು ಸರಿಯಲ್ಲ. ಕೆಆರ್‌ಎಸ್‌ ಕಟ್ಟಿದ್ದು ಯಾರು, ಅದಕ್ಕೆ ಅಡಿಗಲ್ಲು ಹಾಕಿದ್ದು ಯಾರೆಂಬುದು ಎಲ್ಲರಿಗೂ ಗೊತ್ತಿದೆ


. ಕನ್ನಂಬಾಡಿ ಅಣೆಕಟ್ಟೆ ಪ್ರಾರಂಭದಿಂದ ಕೊನೆಯವರೆಗೆ ಏನೆಲ್ಲ ಆಯಿತು, ಶ್ರಮವಹಿಸಿದ್ದು ಯಾರು ಎಂಬುದು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ.


ಸಚಿವ ಮಹದೇವಪ್ಪ ಇಲ್ಲದ ಇತಿಹಾಸದ ಬಗ್ಗೆ ಮಾತನಾಡುವ ಬದಲು ರಾಜ್ಯದಲ್ಲಿ ಜನರಿಗೆ ಒಳ್ಳೆಯ ಆಡಳಿತ ನೀಡಲಿ ಎಂದು ತಿರುಗೇಟು ನೀಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ...

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಬಹುಮತ ತಮಿಳುನಾಡು ಡಿ ಎಂ ಕೆ ಕೇರಳ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ??

ನವದೆಹಲಿ: ಬುಧವಾರ ನಡೆದ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಮತ್ತು ಪಶ್ಚಿಮ...

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...