“ಸಾಕ್ಷಿ-ದೂರುದಾರರು ತೋರಿಸಿರುವ ಸ್ಥಳ 13 ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ವಿಶೇಷ ತನಿಖಾ ತಂಡ ( ಎಸ್ ಐ ಟಿ,) ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದೆ.

ಪ್ರಕರಣದ ಮೇಲ್ವಿಚಾರಣೆಗಾಗಿ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣಬ್ ಮೊಹಾಂತಿ ಅವರು, ಪಾಯಿಂಟ್ 13 ರ ಸಮೀಪ ವಿದ್ಯುತ್ ತಂತಿಗಳು.
ಈ ಸ್ಥಳವು ಮುಖ್ಯ ರಸ್ತೆಗೆ ವಿಸ್ತರಿಸಿರುವುದರಿಂದ ರಾಡಾರ್ ವ್ಯವಸ್ಥೆ ಬಳಸುವ ಮೊದಲು ತಜ್ಞರ ಅಭಿಪ್ರಾಯ ಪಡೆಯುವ ಸಾಧ್ಯತೆಯಿದೆ ಎಂದುಎಸ್ ಐ ಟಿ ಯ ಮೂಲಗಳು

ಸಮಾಧಿ ಸ್ಥಳ ಸಂಖ್ಯೆ 13 ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಗೃಹದ ಸುತ್ತಮುತ್ತಲಿನ ಮುಖ್ಯ ರಸ್ತೆಯ ಹತ್ತಿರದಲ್ಲಿದೆ

ದೂರುದಾರನ ನಂಬಿಕೆಯಂತೆ 13ನೇ ಸ್ಥಳದಲ್ಲಿ ಬಹಳಷ್ಟು ಶವ ಹೂತಿದ್ದು, ಇಲ್ಲಿ ಅಸ್ಥಿಪಂಜರ ಸಿಗುವ ಸಾಧ್ಯತೆ ಇದೆ ಎಂದಿದ್ದಾನೆ. ಈ ಹಿಂದೆ 12 ಸ್ಥಳಗಳಲ್ಲಿ ಶೋಧ ನಡೆಸಿದರೂ, ಒಂದೆರಡು ಕಡೆ ಬಿಟ್ಟರೆ ಬೇರೆ ಕುರುಹು ಸಿಕ್ಕಿರಲಿಲ್ಲ.

ಹೀಗಾಗಿ ದೂರುದಾರನ ನಡೆಯ ಬಗ್ಗೆ ಈಗ ಅನುಮಾನಗಳು ವ್ಯಕ್ತವಾಗಿವೆ. ಎಸ್ಐಟಿ ಇಂದು 13ನೇ ಸ್ಥಳದ ಬದಲು 14 ನೇ ಸ್ಥಳವನ್ನು ಅಗೆಯುತ್ತಿದೆ. ಇದು 11ನೇ ಸ್ಥಳದಿಂದ ಸುಮಾರು 80 ಮೀಟರ್ ದೂರದಲ್ಲಿದೆ
Leave a comment