ಅಪ್ಪ, ಮಗನ ಜಗಳ ಬಿಡಿಸಲು ಬಂದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬರ್ಬರ ಹತ್ಯೆ ಆರೋಪಿಗಳಿಗಾಗಿ ಶೋಧ

86

ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸ್ ಇಲಾಖೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆಗಸ್ಟ್ 5 ರಂದು ರಾತ್ರಿ 11 ಗಂಟೆ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ ತಿರುಪ್ಪುರು ಜಿಲ್ಲೆಯ ಗುಡಿಮಂಗಲಂ ಪೊಲೀಸ್ ಠಾಣೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಎಂ. ಷಣ್ಮುಗವೇಲ್(57) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ಅಳಗುರಾಜ, ಇಬ್ಬರು ವ್ಯಕ್ತಿಗಳು ಕುಡಿದು ಜಗಳವಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ತೆರಳಿದ್ದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಆದರೆ ಪೊಲೀಸ್ ಅಧಿಕಾರಿಯ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಕಾನ್‌ಸ್ಟೆಬಲ್ ನನ್ನು ಓಡಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ಪಶ್ಚಿಮ ವಲಯ ಐಜಿಪಿ ಟಿ. ಸೆಂಥಿಲ್ ಕುಮಾರ್ ಅವರ ಪ್ರಕಾರ, ಕುಟುಂಬದೊಳಗೆ ಜಗಳವಿತ್ತು. ಗಸ್ತು ಕರ್ತವ್ಯದಲ್ಲಿದ್ದ ಎಸ್‌ಎಸ್‌ಐ ಷಣ್ಮುಗವೇಲ್ ಮತ್ತು ಕಾನ್‌ಸ್ಟೆಬಲ್ ಅಳಗುರಾಜ ಅವರು ಸಂಘರ್ಷವನ್ನು ಶಮನಗೊಳಿಸಲು ಉಡುಮಲ್‌ಪೇಟೆ ಬಳಿಯ ಜಮೀನಿಗೆ ತೆರಳಿದ್ದರು.

ಈ ವೇಳೆ ಮಣಿಗಂದನ್ ಎಂಬ ವ್ಯಕ್ತಿ ಎಸ್‌ಎಸ್‌ಐ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಅವರ ಸಹೋದರ ತಂಗಪಾಂಡ್ಯನ್ ಮತ್ತು ಅವರ ತಂದೆ ಮೂರ್ತಿ ಕೂಡ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕಾನ್‌ಸ್ಟೆಬಲ್ ನನ್ನು ಓಡಿಸಿದ್ದಾರೆ ಅವರು ಹೇಳಿದ್ದಾರೆ.
ಎಸ್‌ಎಸ್‌ಐ ಷಣ್ಮುಗವೇಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾನ್‌ಸ್ಟೆಬಲ್ ಜೀವ ಬೆದರಿಕೆಯಿಂದ ಪಾರಾಗಿದ್ದಾರೆ. ಮೂರ್ತಿ ಮತ್ತು ಅವರ ಇಬ್ಬರು ಪುತ್ರರಾದ ಮಣಿಗಂದನ್ ಮತ್ತು ತಂಗಪಾಂಡಿ ವಿರುದ್ಧ ತಲಾ ನಾಲ್ಕು ಪ್ರಕರಣಗಳಿದ್ದು, ಅವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಆರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಐಜಿಪಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

5ನೇ ತಲೆಮಾರಿನ ದೇಶಿಯ ಯುದ್ಧ ವಿಮಾನಗಳನ್ನು ಜಂಟಿಯಾಗಿ ನಿರ್ಮಿಸಲು ಭಾರತಕ್ಕೆ ಆಫರ್ ನೀಡಿದ,:: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ: 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ದೇಶೀಯವಾಗಿ ನಿರ್ಮಿಸಲು ಮುಂದಾಗಿರುವ ಭಾರತಕ್ಕೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್...

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ ಎಂಬ ಭ್ರಮೆಯಿಂದ ಹೊರಬರಬೇಕು : ನಿತಿನ್ ನಬಿನ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನಿನ್ನೆ ಭಾನುವಾರ ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರಿಗೆ,...

ದೇಶದ ಮೊದಲ ಬುಲೆಟ್ ಟ್ರೈನ್ ಮಾದರಿ ಚಿತ್ರ ಅನಾವರಣ

“ನವದೆಹಲಿ: ಜಪಾನ್, ಚೀನಾ, ಜರ್ಮನಿಯಲ್ಲಿ ಅತ್ಯಂತ ಜನಪ್ರಿಯವಾಗಿರುವ ಬುಲೆಟ್ ರೈಲು ಇದೀಗಾ ಭಾರತಕ್ಕೆ ಬರುತ್ತಿದ್ದು, ದೇಶದ...

ಪೋಕ್ಸೋ ಪ್ರಕರಣ :: ಲುಕ್ ಔಟ್ ನೋಟಿಸ್ ಜಾರಿ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವರ ಪುತ್ರ!

ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ...