ಧರ್ಮಸ್ಥಳ ಪ್ರಕರಣ ದೂರುದಾರ ಗುರುತಿಸಿದ ಹೊಸ ಸ್ಪಾಟ್15ಕ್ಕೆ ಸಾಕ್ಷಿ- ದೂರುದಾರರನ್ನು ಕರೆದೊಯ್ದ ಎಸ್ಐಟಿ

76
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ ಹೊಸ ಸ್ಥಳಕ್ಕೆ ಸಾಕ್ಷಿ-ದೂರುದಾರರನ್ನು ಕರೆದೊಯ್ದಿದೆ.


ಸಾಕ್ಷಿ-ದೂರುದಾರನೊಂದಿಗೆ ತನಿಖಾಧಿಕಾರಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಇದ್ದರು. ಹೊಸ ಸ್ಥಳದಲ್ಲಿ ಪರಿಶೀಲನೆ ಮತ್ತು ಭೂಮಿಯನ್ನು ಅಗೆಯುವ ಕಾರ್ಯವನ್ನು ಪ್ರಾರಂಭಿಸುವುದಾಗಿ ಎಸ್‌ಐಟಿಯ ಮೂಲಗಳು ತಿಳಿಸಿದ್ದವು.
ಪ್ರಕರಣದಲ್ಲಿ ಸಾಕ್ಷಿ-ದೂರುದಾರರು ತೋರಿಸಿರುವ ಒಟ್ಟು ಸ್ಥಳಗಳ ಪೈಕಿ ಈಗಾಗಲೇ 13 ಸ್ಥಳಗಳಲ್ಲಿ ಶೋಧ ಕಾರ್ಯ ಪೂರ್ಣಗೊಂಡಿದ್ದು, ಜುಲೈ 31 ರಂದು 6ನೇ ಸ್ಥಳದಲ್ಲಿ ಮಾತ್ರ ಮಾನವ ಅವಶೇಷಗಳು ಕಂಡುಬಂದಿವೆ. ಆಗಸ್ಟ್ 5 ರಂದು, ಎಸ್‌ಐಟಿ 11 ಮತ್ತು 12ನೇ ಸ್ಥಳದಲ್ಲಿ ಅಗೆದಿತ್ತು. ಆದರೆ, ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ.


ಅಲ್ಲದೆ, ಸಾಕ್ಷಿ-ದೂರುದಾರ ಗುರುತಿಸಿದ್ದ 13ನೇ ಜಾಗವನ್ನು ಹೊರತುಪಡಿಸಿ, ಉಳಿದೆಲ್ಲ ಸ್ಥಳಗಳಲ್ಲಿ ಎಸ್ಐಟಿ ಶೋಧ ಕಾರ್ಯ ಪೂರ್ಣಗೊಳಿಸಿದೆ. ಇದೀಗ 15ನೇ ಸ್ಥಳ ಎಂದು ಗುರುತಿಸಿದ ಹೊಸ ಸ್ಥಳದಲ್ಲಿಯೂ ಶೋಧಕ್ಕೆ ಮುಂದಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...