ಡಾ. ವಿಷ್ಣುವರ್ಧನ್ ಸಮಾಧಿ ರಾತ್ರೋರಾತ್ರಿ ನೆಲಸಮ ಅಭಿಮಾನಿಗಳ ಆಕ್ರೋಶ

63

“ಡಾ.ವಿಷ್ಣುವರ್ಧನ್ ಅಭಿಮಾನಿಗಳು ಮತ್ತು ನಟ ಬಾಲಣ್ಣ ಕುಟುಂಬ ನಡುವಿನ ಕಲಹ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋ ರಾತ್ರಿ ಪೊಲೀಸ್ ಭದ್ರತೆಯಲ್ಲಿ ನೆಲಸಮ ಮಾಡಲಾಗಿದ್ದು, ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿ ಸ್ಟುಡಿಯೋ ಮುಂಭಾಗದಲ್ಲಿ ನೆರೆದ ಸಾವಿರಾರು ಅಭಿಮಾನಿಗಳು, ಕಣ್ಣೀರು ಸುರಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಾಲಣ್ಣ ಕುಟುಂಬದ ವಿರುದ್ಧ ಪ್ರತಿಭಟನೆ ನಡೆಸಿದರು.


ಏಕಾಏಕಿನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಉತ್ತರಹಳ್ಳಿ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಕೆಲ ಅಭಿಮಾನಿಗಳನ್ನು ವಶಕ್ಕೆ ಪಡೆದುಕೊಂಡು, ಪ್ರತಿಭಟನೆಯನ್ನು ನಿಲ್ಲಿಸಿದರು.

ಡಾ.ವಿಷ್ಣುವರ್ಧನ್ ಸಮಾಧಿ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಇದೀಗ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೆಂಗೇರಿ ಠಾಣೆ ಪೊಲೀಸರಿಂದ ಸ್ಟುಡಿಯೋ ಸುತ್ತಮುತ್ತ ಬಿಗಿ ಭದ್ರತೆ ನೀಡಲಾಗಿದೆ.

ಬಹಳ ವರ್ಷಗಳಿಂದ ವಿವಾದ ನಡೆಯುತ್ತಿದ್ದು, ಡಾ.ವಿಷ್ಣುವರ್ಧನ್ ಅವರನ್ನು ಅಂತ್ಯಕ್ರಿಯೆ ಮಾಡಿದ ಅಭಿಮಾನ್ ಸ್ಟುಡಿಯೋದ ಜಾಗದಲ್ಲಿಯೇ ವಿಷ್ಣು ಪುಣ್ಯಭೂಮಿಮಾಡಬೇಕುಎಂಬುದು ಅಭಿಮಾನಿಗಳ ಒತ್ತಾಯವಾಗಿತ್ತು.

ಈ ವಿಚಾರವಾಗಿ ಕಳೆದ 11 ವರ್ಷ ಗಳಿಂದ ವಿಷ್ಣು ಅಭಿಮಾನಿಗಳು ಹಾಗೂ ಅಭಿಮಾನ್ ಸ್ಟುಡಿಯೋ ಮಾಲೀಕರಾದ ಹಿರಿಯ ನಟ ಬಾಲಕೃಷ್ಣ ಕುಟುಂಬದ ನಡುವೆ ಕಾನೂನು ಹೋರಾಟ ನಡೆಯುತ್ತಿತ್ತು.

ಈ ಮಧ್ಯೆ ಹಿರಿಯ ನಟಿ ಭಾರತಿ ವಿಷ್ಣು ವರ್ಧನ್ ಸೇರಿ ವಿಷ್ಣು ಕುಟುಂಬದವರು ಸಮಾಧಿ ಸ್ಥಳಕ್ಕಾಗಿ ನಡೆದ ಜಗಳದಿಂದ ನೊಂದು ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನೇ ನಿಲ್ಲಿಸಿದ್ದರು,

ರಾಜ್ಯ ಸರ್ಕಾರ ಮೈಸೂರಿನಲ್ಲಿ ಮಂಜೂರು ಮಾಡಿದ ಸ್ಥಳದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಿದರು. ಆದರೆ, ಅಭಿಮಾನಿಗಳು ಮಾತ್ರ ಅಂತ್ಯಕ್ರಿಯೆ ನಡೆದ ಜಾಗವೇ ತಮಗೆ ಮುಖ್ಯ ಎಂದು ಪಟ್ಟು ಹಿಡಿದಿದ್ದು, ಈ ವಿಚಾರ ಕೋರ್ಟ್‌ ಅಂಗಳಕ್ಕೆ ತಲುಪಿತ್ತು.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....