ಲಾರಿ ಚಾಲಕನ ಬೇಜಾಬ್ದಾರಿ ಚಾಲನೆ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಶಿಕ್ಷಕ ಸಂತೋಷ್

51

ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ

ಬೈಕ್ ಗೆ ಹಿಂದಿನಿಂದ ಬಂದ ಲಾರಿಯೊಂದು‌ ಡಿಕ್ಕಿ‌ ಹೊಡೆದ ಪರಿಣಾಮ‌ ಬೈಕ್ ಸವಾರ ಸಂತೋಷ್ ರಸ್ತೆಗೆ ಬಿದ್ದು ತಲೆ ಮತ್ತು ಮುಖ ಕೈಗಳಿಗೆ ಗಂಭೀರ ಸ್ವರೂಪದ‌ ಗಾಯಗಳಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ವಿವಿಧ ಸಂಘ ಸಂಸ್ಥೆಯಲ್ಲಿ ಗುರುತಿಸಿಕೊಂಡಿರುವ ಕೋಟ ಪಡುಕೇರಿ ಪರಿಸರದಲ್ಲಿ ಜನನುರಾಗಿರುವ ಸೌಮ್ಯ ಸ್ವಭಾವಿ ಸಾಹಿತಿ ಕವಿ ಸಂಘಟಕ ಶಿಕ್ಷಕ ಸಂತೋಷ ನಿಧನ ಕೇವಲ ಒಂದು ತಿಂಗಳ ಹಿಂದೆಯಷ್ಟೇ ಇವರಿಗೆ ಹೆಣ್ಣು ಮಗುವಾಗಿದ್ದು ಮಗುವಿನ ನಾಮಕರಣಕ್ಕೂ ಮೊದಲೇ ಈ ಘಟನೆ ನೆಡೆದಿದ್ದು ಬಹಳ ನೋವಿನ ಸಂಗತಿಯಾಗಿದೆ

ಮೃತರು ಹೆಂಡತಿ ಹಾಗೂ ಒಂದು ತಿಂಗಳ ಮಗು ತಾಯಿ ಸಹೋದರರು ಹಾಗೂ ತನ್ನ ಆಪಾರ ಅಭಿಮಾನಿಗಳನ್ನು ಅಗಲಿದ್ದಾರೆ ದಲಿತ ಸಂಘಟನೆ ಯ ಸಕ್ರಿಯ ಸದಸ್ಯ ರಾಗಿರುವ ಇವರ ನಿಧನ ಸುದ್ದಿಗೆ ಜಿಲ್ಲಾ ದಲಿತ ಸಂಘರ್ಷಸಮಿತಿ (ಅಂಬೇಡ್ಕರ್ ವಾದ ) ಇದರ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರ್ ಮತ್ತು ಪದಾಧಿಕಾರಿಗಳು

ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ. ಗೋಪಾಲಕೃಷ್ಣ ನಾಡತೀವ್ರ ಸಂತಾಪ ಸೂಚಿಸಿದ್ದು ಮೃತರ ಆತ್ಮಕ್ಕೆ ಶಾಂತಿ ಕೊರಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...