ಪ್ರಿಯಾಂಕಾ ಗಾಂಧಿ ಇಸ್ರೇಲ್ ವಿರುದ್ಧ ನೀಡಿರುವ ಹೇಳಿಕೆಗೆ ಇಸ್ರೇಲ್ ರಾಯಭಾರಿ ರುವೆನ್ ಅಜರ್ ತೀವ್ರ ಆಕ್ರೋಶ

55

“ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಇತ್ತೀಚಿನ ಆರೋಪಗಳಿಗೆ ಭಾರತದ ಇಸ್ರೇಲ್‌ನ ರಾಯಭಾರಿ ರುವೆನ್ ಅಜರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಇಸ್ರೇಲ್ ದೇಶ ನರಮೇಧ ಮಾಡುತ್ತಿದೆ. 60,000 ಕ್ಕೂ ಹೆಚ್ಚು ಜನರನ್ನು ಹತ್ಯೆಗೈದಿದೆ. ಅವರಲ್ಲಿ 18,430 ಮಕ್ಕಳು ಸೇರಿದ್ದಾರೆ.
ಅನೇಕ ಮಕ್ಕಳು ಸೇರಿದಂತೆ ನೂರಾರು ಜನರು ಹಸಿವಿನಿಂದ ಸಾಯುವಂತೆ ಮಾಡಿದೆ. ಲಕ್ಷಾಂತರ ಜನರನ್ನು ಹಸಿವಿನಿಂದ ಸಾಯಿಸುವ ಬೆದರಿಕೆ ಹಾಕುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದರು.

ಅಲ್ಲದೇ, ಈ ವಿಚಾರದಲ್ಲಿ ಜಾಗತಿಕ ಮೌನವನ್ನು ಖಂಡಿಸಿದ ಪ್ರಿಯಾಂಕಾ ಗಾಂಧಿ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಈ ವಿನಾಶಕಾರಿ ಕ್ರಮದ ವಿರುದ್ಧ ಭಾರತ ಸರ್ಕಾರ ಮೌನವಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದ್ದರು.
ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳಿಗೆ ಕಿಡಿಕಾರಿರುವ ಅಜರ್, “ನಿಮ್ಮ ಸುಳ್ಳಿನ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಇಸ್ರೇಲ್ 25,000 ಹಮಾಸ್ ಉಗ್ರರನ್ನು ಕೊಂದಿದೆ.

ನಾಗರಿಕರ ಹಿಂದಿರುವ ಹಮಾಸ್‌ನ ಹೀನಾಯ ತಂತ್ರಗಳು, ಸ್ಥಳಾಂತರ ಅಥವಾ ನೆರವಾಗಲು ಪ್ರಯತ್ನಿಸುತ್ತಿರುವ ಜನರ ಮೇಲೆ ಗುಂಡಿನ ದಾಳಿ ಮತ್ತು ಅವರ ರಾಕೆಟ್ ದಾಳಿಯಿಂದ ಜನರು ಜೀವ ತೆತ್ತಬೇಕಾಗಿದೆ.
ಅಲ್ಲದೇ ಇಸ್ರೇಲಿನ ಮಾನವೀಯ ನೆರವಿನ ಕಾರ್ಯವನ್ನು ಉಲ್ಲೇಖಿಸಿರುವ ಅವರು, ಇಸ್ರೇಲ್ ಗಾಜಾಕ್ಕೆ 2 ಮಿಲಿಯನ್ ಟನ್ ಪದಾರ್ಥಗಳನ್ನು ಪೂರೈಸಿದೆ.

ಆದರೆ ಹಮಾಸ್ ಅವರನ್ನು ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಆ ಮೂಲಕ ಹಸಿವನ್ನು ಸೃಷ್ಟಿಸುತ್ತಿದೆ. ಕಳೆದ 50 ವರ್ಷಗಳಲ್ಲಿ ಗಾಜಾ ಜನಸಂಖ್ಯೆಯು ಶೇ. 450 ರಷ್ಟು ಬೆಳೆದಿದೆ.ಅಲ್ಲಿ ಯಾವುದೇ ನರಮೇಧ ನಡೆದಿಲ್ಲ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...