ಪ್ರಿಯಾಂಕಾ ಗಾಂಧಿ ಇಸ್ರೇಲ್ ವಿರುದ್ಧ ನೀಡಿರುವ ಹೇಳಿಕೆಗೆ ಇಸ್ರೇಲ್ ರಾಯಭಾರಿ ರುವೆನ್ ಅಜರ್ ತೀವ್ರ ಆಕ್ರೋಶ

9

“ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಇತ್ತೀಚಿನ ಆರೋಪಗಳಿಗೆ ಭಾರತದ ಇಸ್ರೇಲ್‌ನ ರಾಯಭಾರಿ ರುವೆನ್ ಅಜರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಇಸ್ರೇಲ್ ದೇಶ ನರಮೇಧ ಮಾಡುತ್ತಿದೆ. 60,000 ಕ್ಕೂ ಹೆಚ್ಚು ಜನರನ್ನು ಹತ್ಯೆಗೈದಿದೆ. ಅವರಲ್ಲಿ 18,430 ಮಕ್ಕಳು ಸೇರಿದ್ದಾರೆ.
ಅನೇಕ ಮಕ್ಕಳು ಸೇರಿದಂತೆ ನೂರಾರು ಜನರು ಹಸಿವಿನಿಂದ ಸಾಯುವಂತೆ ಮಾಡಿದೆ. ಲಕ್ಷಾಂತರ ಜನರನ್ನು ಹಸಿವಿನಿಂದ ಸಾಯಿಸುವ ಬೆದರಿಕೆ ಹಾಕುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದರು.

ಅಲ್ಲದೇ, ಈ ವಿಚಾರದಲ್ಲಿ ಜಾಗತಿಕ ಮೌನವನ್ನು ಖಂಡಿಸಿದ ಪ್ರಿಯಾಂಕಾ ಗಾಂಧಿ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಈ ವಿನಾಶಕಾರಿ ಕ್ರಮದ ವಿರುದ್ಧ ಭಾರತ ಸರ್ಕಾರ ಮೌನವಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದ್ದರು.
ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಗಳಿಗೆ ಕಿಡಿಕಾರಿರುವ ಅಜರ್, “ನಿಮ್ಮ ಸುಳ್ಳಿನ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಇಸ್ರೇಲ್ 25,000 ಹಮಾಸ್ ಉಗ್ರರನ್ನು ಕೊಂದಿದೆ.

ನಾಗರಿಕರ ಹಿಂದಿರುವ ಹಮಾಸ್‌ನ ಹೀನಾಯ ತಂತ್ರಗಳು, ಸ್ಥಳಾಂತರ ಅಥವಾ ನೆರವಾಗಲು ಪ್ರಯತ್ನಿಸುತ್ತಿರುವ ಜನರ ಮೇಲೆ ಗುಂಡಿನ ದಾಳಿ ಮತ್ತು ಅವರ ರಾಕೆಟ್ ದಾಳಿಯಿಂದ ಜನರು ಜೀವ ತೆತ್ತಬೇಕಾಗಿದೆ.
ಅಲ್ಲದೇ ಇಸ್ರೇಲಿನ ಮಾನವೀಯ ನೆರವಿನ ಕಾರ್ಯವನ್ನು ಉಲ್ಲೇಖಿಸಿರುವ ಅವರು, ಇಸ್ರೇಲ್ ಗಾಜಾಕ್ಕೆ 2 ಮಿಲಿಯನ್ ಟನ್ ಪದಾರ್ಥಗಳನ್ನು ಪೂರೈಸಿದೆ.

ಆದರೆ ಹಮಾಸ್ ಅವರನ್ನು ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಆ ಮೂಲಕ ಹಸಿವನ್ನು ಸೃಷ್ಟಿಸುತ್ತಿದೆ. ಕಳೆದ 50 ವರ್ಷಗಳಲ್ಲಿ ಗಾಜಾ ಜನಸಂಖ್ಯೆಯು ಶೇ. 450 ರಷ್ಟು ಬೆಳೆದಿದೆ.ಅಲ್ಲಿ ಯಾವುದೇ ನರಮೇಧ ನಡೆದಿಲ್ಲ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಟೋಲ್ ಪ್ಲಾಜಾ ಸಿಬ್ಬಂದಿ

ಮೀರತ್: ದೇಶದಲ್ಲಿ ಇತೀಚಿಗೆ ಹಲ್ಲೆ,ದರೋಡೆ, ಕೊಲೆಯಂತಹ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೈನಿಕರಿಗೂ ಬೆಲೆ ಕೊಡುತ್ತಿಲ್ಲ. ಟೋಲ್...

ಸ್ವಾತಂತ್ರ್ಯ ದಿನದಂದು ಮಾಂಸ ಮಾರಾಟ ನಿಷೇಧ ಜನರ ಆಹಾರ ಪದ್ಧತಿಯ ಸರಕಾರ ನಿರ್ಧರಿಸಬಾರದು’: ರಾಜ್ ಠಾಕ್ರೆ

ಮುಂಬೈ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ಹೇರಿರುವ ಮಾಂಸ ಮಾರಾಟದ ಮೇಲಿನ ನಿಷೇಧವನ್ನು ವಿರೋಧಿಸಿರುವ...

79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ‌ಆರ್ ಎಸ್‌ಎಸ್‌ 100 ವರ್ಷಗಳಲ್ಲಿ ಮಾಡಿದ ಸೇವೆಯನ್ನು ಶ್ಲಾಘಿಸಿದ   ಮೋದಿ

“ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳನ್ನು “ವಿಶ್ವದ ಅತಿದೊಡ್ಡ ಎನ್‌ಜಿಒ”ದ...

ಜಮ್ಮು ಕಾಶ್ಮೀರ ಮೇಘ ಸ್ಪೋಟ ಹಠಾತ್ ಪ್ರವಾಹ 38 ಜನ ಮೃತ್ಯು ರಕ್ಷಣಾ ಕಾರ್ಯ ಪ್ರಾರಂಭ

“ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟದಿಂದ ವಿನಾಶಕಾರಿ...