ಹೆಬ್ರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಿಗೆ ದೇವಸ್ಥಾನಕ್ಕೆ ಬರದಂತೆ ತಡೆದು ಜೀವ ಬೆದರಿಕೆ

74
ನಾಡ್ಪಾಲು ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ  ಅನುವಂಶಿಕ ಆಡಳಿತ ಮುಖ್ಯಸ್ಥರಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ಪ್ರವೇಶ ಮಾಡಲು ಹೋದಾಗ ತಡೆದು ನಿಲ್ಲಿಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಸೋಮೇಶ್ವರ ನಾಡ್ಪಾಲ್ ನಲ್ಲಿ ನಡೆದಿದೆ
ಸುಪ್ರೀತ್‌ , ಚಾಂತಾರು ಬ್ರಹ್ಮಾವರ ಇವರ ಅಜ್ಜಿ ಮನೋರಮಾ ರವರು ನಾಡ್ಪಾಲು ಗ್ರಾಮದ ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮುಕ್ತೇಸರಾಗಿರುತ್ತಾರೆ.


ಸುಪ್ರೀತ್ ಹಾಗೂ ಅವರ ಮನೆಯವರು ದಿನಾಂಕ 12/08/2025 ರಂದು ಮದ್ಯಾಹ್ನ 12:30 ಗಂಟೆಗೆ ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮದ ಸೀತಾನದಿ ನಂದಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಹೋಗಲು ಆವರಣದಲ್ಲಿ ಕಾರಿನಲ್ಲಿ ಕುಳಿತುಕೊಂಡಿರುವಾಗ ವಿಜಯ ಮತ್ತು ಅವನ ಜೊತೆ ಇರುವ ಕೆಲವರು ಬಳಿ ಬಂದು ಕಾರನ್ನು ತಡೆದು ಜೀವ ಬೆದರಿಕೆ ಹಾಕಿ ದೇವಸ್ಥಾನದ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆದರಿಕೆ ಹಾಕಿರುತ್ತಾರೆ.
ಅವರು ಈ ಹಿಂದೆ ಕೂಡಾ ದೇವಸ್ಥಾನದ ವಿಚಾರದಲ್ಲಿ ಬೆದರಿಕೆ ಹಾಕಿರುತ್ತಾರೆ. ಅವರು ತನ್ನ ಕುಟುಂಬಕ್ಕೆ ಹಾನಿ ಉಂಟು ಮಾಡಬಹುದಾಗಿಎಂದು ನೀಡಿದ ದೂರಿನಂತೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ .‌”

Leave a comment

Leave a Reply

Your email address will not be published. Required fields are marked *

Related Articles

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್...