ಹೆಬ್ರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಿಗೆ ದೇವಸ್ಥಾನಕ್ಕೆ ಬರದಂತೆ ತಡೆದು ಜೀವ ಬೆದರಿಕೆ

11
ನಾಡ್ಪಾಲು ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ  ಅನುವಂಶಿಕ ಆಡಳಿತ ಮುಖ್ಯಸ್ಥರಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ಪ್ರವೇಶ ಮಾಡಲು ಹೋದಾಗ ತಡೆದು ನಿಲ್ಲಿಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಸೋಮೇಶ್ವರ ನಾಡ್ಪಾಲ್ ನಲ್ಲಿ ನಡೆದಿದೆ
ಸುಪ್ರೀತ್‌ , ಚಾಂತಾರು ಬ್ರಹ್ಮಾವರ ಇವರ ಅಜ್ಜಿ ಮನೋರಮಾ ರವರು ನಾಡ್ಪಾಲು ಗ್ರಾಮದ ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮುಕ್ತೇಸರಾಗಿರುತ್ತಾರೆ.


ಸುಪ್ರೀತ್ ಹಾಗೂ ಅವರ ಮನೆಯವರು ದಿನಾಂಕ 12/08/2025 ರಂದು ಮದ್ಯಾಹ್ನ 12:30 ಗಂಟೆಗೆ ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮದ ಸೀತಾನದಿ ನಂದಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಹೋಗಲು ಆವರಣದಲ್ಲಿ ಕಾರಿನಲ್ಲಿ ಕುಳಿತುಕೊಂಡಿರುವಾಗ ವಿಜಯ ಮತ್ತು ಅವನ ಜೊತೆ ಇರುವ ಕೆಲವರು ಬಳಿ ಬಂದು ಕಾರನ್ನು ತಡೆದು ಜೀವ ಬೆದರಿಕೆ ಹಾಕಿ ದೇವಸ್ಥಾನದ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆದರಿಕೆ ಹಾಕಿರುತ್ತಾರೆ.
ಅವರು ಈ ಹಿಂದೆ ಕೂಡಾ ದೇವಸ್ಥಾನದ ವಿಚಾರದಲ್ಲಿ ಬೆದರಿಕೆ ಹಾಕಿರುತ್ತಾರೆ. ಅವರು ತನ್ನ ಕುಟುಂಬಕ್ಕೆ ಹಾನಿ ಉಂಟು ಮಾಡಬಹುದಾಗಿಎಂದು ನೀಡಿದ ದೂರಿನಂತೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ .‌”

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ಎಸ್ ಐ ಟಿ ಗೆ ದೂರುದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ)...

ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ...

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ ದಂತ ತಪಾಸಣಾ  ಶಿಬಿರ

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರೋಟರಿ ಕ್ಲಬ್ ಪಡುಬಿದ್ರಿ, ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ...

ಲಾರಿ ಚಾಲಕನ ಬೇಜಾಬ್ದಾರಿ ಚಾಲನೆ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಶಿಕ್ಷಕ ಸಂತೋಷ್

ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ ಬೈಕ್...