ಪಂಚಾಯತ್ ಅಧ್ಯಕ್ಷರ ಸದಸ್ಯರ ಗೌರವಧನ ಹೆಚ್ಚಳಕ್ಕೆ ಮನವಿ ಶ್ರೀ ಮಂಜುನಾಥ್ ಭಂಡಾರಿರವರ ಪಂಚಾಯತ್ ಸದಸ್ಯರ ಹಾಗೂ ಸಿಬ್ಬಂದಿಗಳ ಪರವಾದ ಕಾಳಜಿ ಶ್ಲಾಘನೀಯ: ನವೀನ್ ಸಾಲ್ಯಾನ್

45

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀಯುತ ಮಂಜುನಾಥ್ ಭಂಡಾರಿ ಅವರು ನಿಯಮ 72 ಗಮನ ಸೆಳೆಯುವ ಸೂಚನೆಯ ಮೇರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರ ಹಾಗೂ ಸದಸ್ಯರ ಗೌರವಧನವನ್ನು ಹೆಚ್ಚಿಸುವಂತೆ ಹಾಗೂ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಿ ವೇತನ ಭದ್ರತೆ ಒದಗಿಸುವಂತೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಲ್ಲಿ ಮನವಿ ಮಾಡಿದರು.
ಈ ಹಿಂದೆ ಪಂಚಾಯತ್ ಸದಸ್ಯರ ಅಧ್ಯಕ್ಷರ ಉಪಾಧ್ಯಕ್ಷರ ಗೌರವ ಧನವನ್ನು ಹೆಚ್ಚಿಸಿದ ಹೆಮ್ಮೆ ಸನ್ಮಾನ್ಯ ಮಂಜುನಾಥ್ ಭಂಡಾರಿಯವರದ್ದು.ಪಂಚಾಯತ್ ಆಡಳಿತ ಸ್ಥಳೀಯ ಆಡಳಿತವಾಗಿದ್ದು ಜನಸಾಮಾನ್ಯರ ಯಾವುದೇ ಸಮಸ್ಯೆಗಳಿದ್ದರು ಅಭಿವೃದ್ಧಿ ವಿಚಾರಗಳು ಇದ್ದರೆ ಸಾರ್ವಜನಿಕರು ಮೊದಲು ಸಂಪರ್ಕ ಮಾಡುವುದೆ ಪಂಚಾಯತ್ ಸದಸ್ಯರನ್ನು,ಹೆಚ್ಚಿನ ಪಂಚಾಯತ್ ಸದಸ್ಯರು ಆರ್ಥಿಕವಾಗಿ ದುರ್ಬಲವಾಗಿದ್ದು ಅವರಿಗೆ ಗೌರವ ಧನ ಹೆಚ್ಚಿಸುವಲ್ಲಿ ರಾಜ್ಯದ ವಿಧಾನಮಂಡಲದಲ್ಲಿ ಧ್ವನಿ ಎತ್ತಿದ್ದು ಪಂಚಾಯತ್ ಸದಸ್ಯರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಇಮ್ಮಡಿಯಾಗಿದೆ ಎಂದು ಉಡುಪಿ ಜಿಲ್ಲೆ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲ್ಯಾನ್ ಹರ್ಷ ವ್ಯಕ್ತ ಪಡಿಸಿದರು.ಮುಂದುವರೆದು ಮುಂಬರುವಪಂಚಾಯತ್ ,ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಶೀಘ್ರವಾಗಿ ಪಕ್ಷದ ಚಿಹ್ನೆಯಡಿ ಕೈಗೊಳ್ಳಲು ಸರ್ಕಾರದಿಂದ ನಿರ್ಣಯಿಸುವಂತೆ ಮನವಿ ಮಾಡಿದ್ದು ಕೂಡ ಸರಿಯಾದ ನಿರ್ಧಾರ ಎಂದು ನವೀನ್ ಸಾಲ್ಯಾನ್ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...