ಪಂಚಾಯತ್ ಅಧ್ಯಕ್ಷರ ಸದಸ್ಯರ ಗೌರವಧನ ಹೆಚ್ಚಳಕ್ಕೆ ಮನವಿ ಶ್ರೀ ಮಂಜುನಾಥ್ ಭಂಡಾರಿರವರ ಪಂಚಾಯತ್ ಸದಸ್ಯರ ಹಾಗೂ ಸಿಬ್ಬಂದಿಗಳ ಪರವಾದ ಕಾಳಜಿ ಶ್ಲಾಘನೀಯ: ನವೀನ್ ಸಾಲ್ಯಾನ್

6

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀಯುತ ಮಂಜುನಾಥ್ ಭಂಡಾರಿ ಅವರು ನಿಯಮ 72 ಗಮನ ಸೆಳೆಯುವ ಸೂಚನೆಯ ಮೇರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರ ಹಾಗೂ ಸದಸ್ಯರ ಗೌರವಧನವನ್ನು ಹೆಚ್ಚಿಸುವಂತೆ ಹಾಗೂ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಿ ವೇತನ ಭದ್ರತೆ ಒದಗಿಸುವಂತೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಲ್ಲಿ ಮನವಿ ಮಾಡಿದರು.
ಈ ಹಿಂದೆ ಪಂಚಾಯತ್ ಸದಸ್ಯರ ಅಧ್ಯಕ್ಷರ ಉಪಾಧ್ಯಕ್ಷರ ಗೌರವ ಧನವನ್ನು ಹೆಚ್ಚಿಸಿದ ಹೆಮ್ಮೆ ಸನ್ಮಾನ್ಯ ಮಂಜುನಾಥ್ ಭಂಡಾರಿಯವರದ್ದು.ಪಂಚಾಯತ್ ಆಡಳಿತ ಸ್ಥಳೀಯ ಆಡಳಿತವಾಗಿದ್ದು ಜನಸಾಮಾನ್ಯರ ಯಾವುದೇ ಸಮಸ್ಯೆಗಳಿದ್ದರು ಅಭಿವೃದ್ಧಿ ವಿಚಾರಗಳು ಇದ್ದರೆ ಸಾರ್ವಜನಿಕರು ಮೊದಲು ಸಂಪರ್ಕ ಮಾಡುವುದೆ ಪಂಚಾಯತ್ ಸದಸ್ಯರನ್ನು,ಹೆಚ್ಚಿನ ಪಂಚಾಯತ್ ಸದಸ್ಯರು ಆರ್ಥಿಕವಾಗಿ ದುರ್ಬಲವಾಗಿದ್ದು ಅವರಿಗೆ ಗೌರವ ಧನ ಹೆಚ್ಚಿಸುವಲ್ಲಿ ರಾಜ್ಯದ ವಿಧಾನಮಂಡಲದಲ್ಲಿ ಧ್ವನಿ ಎತ್ತಿದ್ದು ಪಂಚಾಯತ್ ಸದಸ್ಯರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಇಮ್ಮಡಿಯಾಗಿದೆ ಎಂದು ಉಡುಪಿ ಜಿಲ್ಲೆ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲ್ಯಾನ್ ಹರ್ಷ ವ್ಯಕ್ತ ಪಡಿಸಿದರು.ಮುಂದುವರೆದು ಮುಂಬರುವಪಂಚಾಯತ್ ,ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಶೀಘ್ರವಾಗಿ ಪಕ್ಷದ ಚಿಹ್ನೆಯಡಿ ಕೈಗೊಳ್ಳಲು ಸರ್ಕಾರದಿಂದ ನಿರ್ಣಯಿಸುವಂತೆ ಮನವಿ ಮಾಡಿದ್ದು ಕೂಡ ಸರಿಯಾದ ನಿರ್ಧಾರ ಎಂದು ನವೀನ್ ಸಾಲ್ಯಾನ್ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮ ರಾಜಕಾರಣಕ್ಕಾಗಿ ಬಿಜೆಪಿಯವರಿಗೆ ಧರ್ಮಸ್ಥಳ ಬೇಕು ಬಿಜೆಪಿ ವಿರುದ್ಧ ::ಡಿ ಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ...

ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಆದೇಶ ಸುಪ್ರೀಂ ಕೋರ್ಟ್,

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಲಾಗಿದ್ದ...

ಅಗಸ್ಟ್ 15 ರಿಂದ ಮುಜರಾಯಿ ಇಲಾಖೆ ಅಧೀನ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಸಚಿವ ರಾಮಲಿಂಗ ರೆಡ್ಡಿ

“ಆಗಸ್ಟ್ 15 ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು...

ಸಿದ್ದರಾಮಯ್ಯ ಬಾದಾಮಿ ಚುನಾವಣೆ ಯಲ್ಲಿ ಜಯಗಳಿಸಲು 3ಸಾವಿರ ಮತ ಖರೀದಿ ಆರೋಪ ಚುನಾವಣಾ ಆಯೋಗಕ್ಕೆ ದೂರು

2018ರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳಲು...