ಸ್ವಾತಂತ್ರ್ಯ ದಿನದಂದು ಮಾಂಸ ಮಾರಾಟ ನಿಷೇಧ ಜನರ ಆಹಾರ ಪದ್ಧತಿಯ ಸರಕಾರ ನಿರ್ಧರಿಸಬಾರದು’: ರಾಜ್ ಠಾಕ್ರೆ

8

ಮುಂಬೈ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ಹೇರಿರುವ ಮಾಂಸ ಮಾರಾಟದ ಮೇಲಿನ ನಿಷೇಧವನ್ನು ವಿರೋಧಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಅಧ್ಯಕ್ಷ ರಾಜ್ ಠಾಕ್ರೆ, ‘ಜನರ ಆಹಾರ ಪದ್ಧತಿಯ ಸರ್ಕಾರ ನಿರ್ಧರಿಸಬಾರದು’ ಎಂದು ಕಿಡಿಕಾರಿದ್ದಾರೆ.


ಮಾಂಸ ಮಾರಾಟದ ಮೇಲಿನ ನಿಷೇಧವನ್ನು ವಿಧಿಸುವ ಹಕ್ಕು ನಾಗರಿಕ ಸಂಸ್ಥೆಗಳಿಗೆ ಇಲ್ಲ ಎಂದು ಹೇಳಿದ ರಾಜ್ ಠಾಕ್ರೆ, ‘ಒಬ್ಬರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂದು ಸರ್ಕಾರ ಮತ್ತು ನಾಗರಿಕ ಸಂಸ್ಥೆಗಳು ನಿರ್ಧರಿಸಬಾರದು.
ನಾವು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಏನು ತಿನ್ನಬೇಕೆಂದು ಆಯ್ಕೆ ಮಾಡುವ ಸ್ವಾತಂತ್ರ್ಯ ನಮಗಿಲ್ಲ. ಸ್ವಾತಂತ್ರ್ಯ ದಿನದಂದು ಯಾವುದೇ ನಿಷೇಧವನ್ನು ತರುವುದು ವಿರೋಧಾಭಾಸವಾಗಿದೆ” ಎಂದು ಹೇಳಿದರು.
ಅಂದಹಾಗೆ ಮಹಾರಾಷ್ಟ್ರದ ನಾಗ್ಪುರ, ನಾಸಿಕ್, ಮಾಲೆಗಾಂವ್, ಛತ್ರಪತಿ ಸಂಭಾಜಿನಗರ ಮತ್ತು ಕಲ್ಯಾಣ್-ಡೊಂಬಿವ್ಲಿಯಲ್ಲಿನ ಪುರಸಭೆಗಳು ಆಗಸ್ಟ್ 15 ರಂದು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ನಿರ್ದೇಶಿಸಿ ಆದೇಶಗಳನ್ನು ಹೊರಡಿಸಿವೆ.
ಹಿಂದೂ ಮತ್ತು ಜೈನ ಹಬ್ಬಗಳ ದೃಷ್ಟಿಯಿಂದ ಮಾಂಸ ಮಾರಾಟದ ಮೇಲಿನ ನಿಷೇಧವನ್ನು ಇನ್ನೂ ಕೆಲ ದಿನಗಳ ವರೆಗೆ ಮುಂದುವರೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದು ಸರ್ಕಾರ ಮತ್ತು ವಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಗಿದ್ದು, ಸರ್ಕಾರದ ಮಾಂಸ ಮಾರಾಟ ನಿಷೇಧ ನಡೆಯನ್ನು ವಿಪಕ್ಷಗಳು ಟೀಕಿಸಿವೆ. ಆದರೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಸರ್ಕಾರವು ಜನರ ಆಹಾರ ಆಯ್ಕೆಗಳನ್ನು ನಿಯಂತ್ರಿಸಲು ಆಸಕ್ತಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ವಾತಂತ್ರ್ಯ ದಿನದಂದು ಕಸಾಯಿಖಾನೆಗಳನ್ನು ಮುಚ್ಚುವ ನೀತಿಯನ್ನು ಮೊದಲು 1988 ರಲ್ಲಿ ಜಾರಿಗೆ ತರಲಾಯಿತು ಎಂದು ಬಿಜೆಪಿ ಹೇಳಿದ್ದು, ಈಗ ಎನ್‌ಸಿಪಿ-ಶರದ್‌ಚಂದ್ರ ಪವಾರ್ ನೇತೃತ್ವದ ಶರದ್ ಪವಾರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಮತ್ತು ವಿರೋಧ ಪಕ್ಷಗಳು ಈ ಬಗ್ಗೆ ಹಿರಿಯ ರಾಜಕಾರಣಿಯನ್ನು ಪ್ರಶ್ನಿಸುತ್ತವೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

Leave a comment

Leave a Reply

Your email address will not be published. Required fields are marked *

Related Articles

79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ‌ಆರ್ ಎಸ್‌ಎಸ್‌ 100 ವರ್ಷಗಳಲ್ಲಿ ಮಾಡಿದ ಸೇವೆಯನ್ನು ಶ್ಲಾಘಿಸಿದ   ಮೋದಿ

“ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳನ್ನು “ವಿಶ್ವದ ಅತಿದೊಡ್ಡ ಎನ್‌ಜಿಒ”ದ...

ಜಮ್ಮು ಕಾಶ್ಮೀರ ಮೇಘ ಸ್ಪೋಟ ಹಠಾತ್ ಪ್ರವಾಹ 38 ಜನ ಮೃತ್ಯು ರಕ್ಷಣಾ ಕಾರ್ಯ ಪ್ರಾರಂಭ

“ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟದಿಂದ ವಿನಾಶಕಾರಿ...

ಪ್ರಿಯಾಂಕಾ ಗಾಂಧಿ ಇಸ್ರೇಲ್ ವಿರುದ್ಧ ನೀಡಿರುವ ಹೇಳಿಕೆಗೆ ಇಸ್ರೇಲ್ ರಾಯಭಾರಿ ರುವೆನ್ ಅಜರ್ ತೀವ್ರ ಆಕ್ರೋಶ

“ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ...

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ,ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಯಾಣ

ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು...