ಕೊಲ್ಲೂರು ದೇವಸ್ಥಾನದಲ್ಲಿ ಜನಜಂಗುಳಿಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರಕಳ್ಳತನ

3
ಕೊಲ್ಲೂರು ದೇವಸ್ಥಾನದಲ್ಲಿ ಸರಕಳ್ಳರ ಕೈಚಳಕ  ಜಯಂತಿ ,ಮುದ್ರಾಡಿ  ಹೆಬ್ರಿ ಇವರು ಮಗಳು ಪ್ರತಿಮಾ ಹಾಗೂ ಅಳಿಯ ದೀರಜ್‌‌‌ ನೊಂದಿಗೆ ಕಾರಿನಲ್ಲಿ ಪ್ರಯಾಣಿಸಿ ಮಧ್ಯಾಹ್ನ 12:30 ಗಂಟೆಗೆ, ಕೊಲ್ಲೂರು  ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿರುತ್ತಾರೆ.


ಪ್ರತಿಮಾ ಹಾಗೂ ಅಳಿಯ ದೀರಜ್‌‌‌ ರವರು ಕ್ಯೂನಲ್ಲಿ ನಿಂತುಕೊಂಡ ಸಮಯ ಜಯಂತಿಯವರು ಶ್ರೀ ವೀರಭದ್ರ ದೇವರಿಗೆ ಕೈ ಮುಗಿದು ಬರುವುದಾಗಿ ಹೇಳಿ ಅಲ್ಲಿಗೆ ಹೋದ ಸಮಯ ಒಮ್ಮೇಲೆ ಮಳೆ ಬಂದಿದ್ದು
ಈ ಸಮಯ ದೇವಸ್ಥಾನದ ಹೊರಾಂಗಣದಲ್ಲಿ ನೆರೆದ ಜನರು ಒಮ್ಮೇಲೆ ವೀರಭದ್ರ ದೇವರ ಗುಡಿಯ ಕಡೆಗೆ ನುಗ್ಗಿ ಜಯಂತಿಯವರ ಮೈ ಮೇಲೆ ಬಿದ್ದಿದ್ದು, ಜನರು ಹೋದ ಬಳಿಕ ಮಗಳಿದ್ದ ಕ್ಯೂ ಸ್ಥಳಕ್ಕೆ ಹೋಗಿ ನೋಡಲಾಗಿ ಜಯಂತಿಯವರ ಕುತ್ತಿಗೆಯಲ್ಲಿದ್ದ 5 ಪವನ್‌‌ ಇರುವ ಚಿನ್ನದ ಸರವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ತಿಳಿದಿರುತ್ತದೆ.
ಮಧ್ಯಾಹ್ನ 12:30 ಗಂಟೆಯಿಂದ 01:00 ಗಂಟೆಯ ಮಧ್ಯೆ ಅವಧಿಯಲ್ಲಿ ಶ್ರೀ ವೀರಭದ್ರ ದೇವರ ಗುಡಿಯಲ್ಲಿ ಇರುವ ಸಮಯದಲ್ಲಿ ಯಾರೋ ಕಳ್ಳರು ಜಯಂತಿ ಯವರ ಕುತ್ತಿಗೆಯಲ್ಲಿದ್ದ 5 ಪವನ್‌‌ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಮಂಗಳೂರು ಅಂಚೆ ಇಲಾಖೆ  ಉದ್ಯೋಗಿಗಳಂತೆ ನಂಬಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ದೆ ಮಹಿಳೆಗೆ 3.9 ಕೋಟಿ ವಂಚನೆ

ಮಂಗಳೂರು: ಅಂಚೆ ಕಚೇರಿಯ ಉದ್ಯೋಗಿಗಳಂತೆ ನಟಿಸಿ ಎಮ್ ಡಿ ಎಮ್ ಎ  ಹೊಂದಿರುವ ಪಾರ್ಸೆಲ್ ಕಳುಹಿಸಿದ್ದಕ್ಕಾಗಿ’...

ಯೂಟ್ಯೂಬರ್‌ಗಳ ಮೇಲೆ ಹಲ್ಲೆ,ಪ್ರಕರಣ ಓರ್ವನ ಬಂಧನ; 7 ಎಫ್ ಐ ಆರ್ ದಾಖಲು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು...

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ ...