ಕೊಲ್ಲೂರು ದೇವಸ್ಥಾನದಲ್ಲಿ ಜನಜಂಗುಳಿಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರಕಳ್ಳತನ

51
ಕೊಲ್ಲೂರು ದೇವಸ್ಥಾನದಲ್ಲಿ ಸರಕಳ್ಳರ ಕೈಚಳಕ  ಜಯಂತಿ ,ಮುದ್ರಾಡಿ  ಹೆಬ್ರಿ ಇವರು ಮಗಳು ಪ್ರತಿಮಾ ಹಾಗೂ ಅಳಿಯ ದೀರಜ್‌‌‌ ನೊಂದಿಗೆ ಕಾರಿನಲ್ಲಿ ಪ್ರಯಾಣಿಸಿ ಮಧ್ಯಾಹ್ನ 12:30 ಗಂಟೆಗೆ, ಕೊಲ್ಲೂರು  ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿರುತ್ತಾರೆ.


ಪ್ರತಿಮಾ ಹಾಗೂ ಅಳಿಯ ದೀರಜ್‌‌‌ ರವರು ಕ್ಯೂನಲ್ಲಿ ನಿಂತುಕೊಂಡ ಸಮಯ ಜಯಂತಿಯವರು ಶ್ರೀ ವೀರಭದ್ರ ದೇವರಿಗೆ ಕೈ ಮುಗಿದು ಬರುವುದಾಗಿ ಹೇಳಿ ಅಲ್ಲಿಗೆ ಹೋದ ಸಮಯ ಒಮ್ಮೇಲೆ ಮಳೆ ಬಂದಿದ್ದು
ಈ ಸಮಯ ದೇವಸ್ಥಾನದ ಹೊರಾಂಗಣದಲ್ಲಿ ನೆರೆದ ಜನರು ಒಮ್ಮೇಲೆ ವೀರಭದ್ರ ದೇವರ ಗುಡಿಯ ಕಡೆಗೆ ನುಗ್ಗಿ ಜಯಂತಿಯವರ ಮೈ ಮೇಲೆ ಬಿದ್ದಿದ್ದು, ಜನರು ಹೋದ ಬಳಿಕ ಮಗಳಿದ್ದ ಕ್ಯೂ ಸ್ಥಳಕ್ಕೆ ಹೋಗಿ ನೋಡಲಾಗಿ ಜಯಂತಿಯವರ ಕುತ್ತಿಗೆಯಲ್ಲಿದ್ದ 5 ಪವನ್‌‌ ಇರುವ ಚಿನ್ನದ ಸರವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು ತಿಳಿದಿರುತ್ತದೆ.
ಮಧ್ಯಾಹ್ನ 12:30 ಗಂಟೆಯಿಂದ 01:00 ಗಂಟೆಯ ಮಧ್ಯೆ ಅವಧಿಯಲ್ಲಿ ಶ್ರೀ ವೀರಭದ್ರ ದೇವರ ಗುಡಿಯಲ್ಲಿ ಇರುವ ಸಮಯದಲ್ಲಿ ಯಾರೋ ಕಳ್ಳರು ಜಯಂತಿ ಯವರ ಕುತ್ತಿಗೆಯಲ್ಲಿದ್ದ 5 ಪವನ್‌‌ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...