ವರುಣನ ಆರ್ಭಟ ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸಿದ –ಮಲ್ಲಿನಾಥ್ ನಾಗನಹಳ್ಳಿ

59

ಕಲಬುರ್ಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಗ್ರಾಮಗಳಲ್ಲಿ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಬಲಿಷ್ಠ ಬೆಳೆ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಈ ಬಾರಿ ಸುರಿದ ಮಳೆಯ ಪ್ರಮಾಣ ಸಾಮಾನ್ಯ ಮಿತಿಯನ್ನು ಬಹಳಷ್ಟು ಮೀರಿದೆ.

ಸೋಯಾಬೀನ್, ಉದ್ದು, ಹೆಸರು, ಜೋಳ, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿ ಸಾವಿರಾರು ಹೆಕ್ಟೇರ್ ಭೂಮಿಯು ಹಾನಿಗೊಳಗಾಗಿದ್ದು, ರೈತರ ಜೀವನ ಭವಿಷ್ಯ ಗೊಂದಲಕ್ಕೆ ಒಳಗಾಗಿದೆ.

ಈ ತುರ್ತು ಪರಿಸ್ಥಿತಿಯನ್ನು ಮನಗಂಡು, ಹಾನಿಗೊಳಗಾದ ರೈತರು ಮತ್ತು ಜನತೆಗೆ ತಕ್ಷಣ ಪರಿಹಾರ ನೀಡುವಂತೆ ಈ ಗ್ರಾಮಗಳನ್ನು ಅತೀವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ, ಅಧ್ಯಕ್ಷರು ಕೋಟನೂರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮೂಲಕ ಸರಕಾರಕ್ಕೆ ವಿನಂತಿ ಸಲ್ಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...