ರಾಜಕೀಯ ‘ನಾನ್ ಅಡ್ಜಸ್ಟ್‌ಮೆಂಟ್‌’ ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಯತ್ನಾಳ್!

54

ಬೆಂಗಳೂರು: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನ್ ಅಡ್ಜಸ್ಟ್‌ಮೆಂಟ್‌ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.


ರಾಜ್ಯದ ಆರ್ಥಿಕ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಬಿಜೆಪಿ ಸರ್ಕಾರವು 2019-23ರ ಅವಧಿಯಲ್ಲಿ ಹಣವಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದೆ ಎಂದು ಆರೋಪಿಸಿದ ನಂತರ ಯತ್ನಾಳ್ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹೇಳಿದರು.



ಸಿದ್ದರಾಮಯ್ಯ ಅವರಿಗೆ ನಮ್ಮಿಬ್ಬರ ಬೆಂಬಲ ಸಿಕ್ಕಿದೆ. ನಿಮ್ಮನ್ನೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಜೆಡಿಎಸ್‌ನಿಂದ ಉಚ್ಚಾಟಿಸಿದ್ದರು. ಹೀಗೆ ಉಚ್ಚಾಟಿಸಲ್ಪಟ್ಟವರು ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತಾರೆ ಅಂತಾ ಯತ್ನಾಳ್ ಹೇಳಿದರು. ಇದಕ್ಕೆ ಲಘು ಹಾಸ್ಯದ ದಾಟಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ, ನೀವೂ ಮುಖ್ಯಮಂತ್ರಿಯಾದ್ರೆ ನನಗೆ ಸಂತೋಷ ಎಂದರು.



ಆದರೆ ಯಾವ ಪಕ್ಷದಿಂದ ಸಿಎಂ ಆಗ್ತೀರಾ? ಎಂದು ಯತ್ನಾಳ್ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ಹೊಸ ಪಕ್ಷ ಕಟ್ಟುವಂತೆ ಸೂಚಿಸಿದರು. ಅದಕ್ಕೆ ಉತ್ತರಿಸಿದ ಯತ್ನಾಳ್, ನಾನ್ ಅಡ್ಜಸ್ಟ್‌ಮೆಂಟ್‌ ಪಕ್ಷ ಕಟ್ಟುತ್ತೇನೆ. ಅದು ಬಿಜೆಪಿಯ ಮತಗಳನ್ನು ಕಡಿಮೆ ಮಾಡಿದರೆ ಚಿಂತಿಸಬೇಡಿ. ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.



ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಯತ್ನಾಳ್ ಹೊಸ ಪಕ್ಷ ಆರಂಭಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕುಟುಂಬ ಆಡಳಿತ ಹಾಗೂ ಸಿದ್ದರಾಮಯ್ಯ- ಯಡಿಯೂರಪ್ಪ ಅವರ ಹೊಂದಾಣಿಕೆ ರಾಜಕೀಯ ವಿರುದ್ಧ ವಿರುದ್ಧ ಪದೇ ಪದೇ ಟೀಕೆ ಮಾಡುವ ಮೂಲಕ ಆರು ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್ ಉಚ್ಚಾಟಿತರಾಗಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...