ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಗುರುತು ಬಹಿರಂಗ, ಕೋರ್ಟ್ ಗೆ ಹಾಜರುಪಡಿಸಿದ ಎಸ್ಐಟಿ ಅಧಿಕಾರಿಗಳು

60

ರಾಜ್ಯದ ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರವಾಗಿರುವ ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಹೊಂದಿರುವ ಧರ್ಮಸ್ಥಳ ಸುತ್ತಮುತ್ತ ಹಲವು ಶವಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿಯೊಬ್ಬ ಹೇಳಿ ಪ್ರಕರಣವನ್ನು ರಾಜ್ಯಸರ್ಕಾರ ಎಸ್ ಐಟಿ ತನಿಖೆಗೆ ವಹಿಸಿ ಅನಾಮಿಕ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ಆತನ ಸಮ್ಮುಖದಲ್ಲಿಯೇ ಹುಡುಕಾಟ ನಡೆಸಿತ್ತು.
ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಇಂದು ಬೆಳಗ್ಗೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ಮ್ಯಾನ್ ನನ್ನ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ.

ಇಷ್ಟು ದಿನ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಮುಖವಾಡವನ್ನು ತೆಗೆಯಲಾಗಿದ್ದು ಗುರುತು ಬಹಿರಂಗಪಡಿಸಲಾಗಿದೆ. ಬೆಳ್ತಂಗಡಿಗೆ ಕರೆತಂದ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆದಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ  ಎಸ್ ಐ ಟಿ  ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಮಾಸ್ಕ್ಮ್ಯಾನ್ ಆರೋಪದ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯನನ್ನು ತನಿಖೆ ಮಾಡಿದ್ದರು.

ಐಪಿಎಸ್‌ ಅಧಿಕಾರಿ ಪ್ರಣವ್ ಮೊಹಂತಿ ಕೂಡ ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್ಮ್ಯಾನ್ ವಿಚಾರಣೆ ಮಾಡಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಬಂಧಿಸಲಾಗಿದೆ.
ಬಂಧನಕ್ಕೆ ಕಾರಣ ಅನಾಮಿಕ ದೂರುದಾರನು ನೀಡಿದ ಮಾಹಿತಿ ಮತ್ತು ತನಿಖೆ ನಂತರ ದೊರೆತ ವಾಸ್ತವಾಂಶಗಳ ನಡುವೆ ಭಾರಿ ವೈರುಧ್ಯಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಎಸ್‌ಐಟಿಯು ಈ ವ್ಯಕ್ತಿ ಸುಳ್ಳು ಮಾಹಿತಿ ನೀಡಿದ್ದಾನೆ, ತಪ್ಪು ದೂರು ಕೊಟ್ಟಿದ್ದಾನೆ ಮತ್ತು ತನಿಖೆಗೆ ಅಡ್ಡಿಪಡಿಸಿದ್ದಾನೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸಿದರು

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...