ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು! ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?

50

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದಕ್ಕೂ ಮುನ್ನ ಉಡುಪಿ ನ್ಯಾಯಾಲಯದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಾದ ಮಂಡಿಸಿದ ವಕೀಲರು, ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ.

ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಹೇಳಿದರು.
ಈ ವೇಳೆ ಪ್ರತಿವಾದಿಗಳಿಂದ ಆಕ್ಷೇಪ ಮಾಡಲಾಯಿತು. ಆದರೆ, ವಾದ ವಿವಾದ ಆಲಿಸಿದ ನ್ಯಾಯಾಧೀಶ ನಾಗೇಶ್, ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಲಾಗಿದೆ

  ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಆ.21ರಂದು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಇದಾದ ನಂತರ ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಆಗಸ್ಟ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಇಂದು ಪುನಃ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ 2 ಗಂಟೆಗಳ ಕಾಲ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರ ವಿಚಾರಣೆಗೆ ಒಪ್ಪಿಸಿ ಕಾಲಾವಕಾಶ ನೀಡಿತ್ತು.

ಪೊಲೀಸರು ವಿಚಾರಣೆ ನಡೆಸಿದ ನಂತರ ಪುನಃ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಎರಡೂ ಕಡೆ ವಕೀಲರ ವಾದ ಆಲಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮತ್ತೊಂದೆಡೆ ಧರ್ಮಸ್ಥಳ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಮನೆಯಲ್ಲಿ ನಾಲ್ಕು ದಿನಗಳ ಕಾಲ ನಾನು ಇದ್ದಿದ್ದು ನಿಜ ಎಂದು ಸುಜಾತ್ ಭಟ್ ಹೇಳಿಕೆ ನೀಡಿದ್ದು, ಇದರಲ್ಲಿ ಮತ್ತೆ ಬಂಧನಕ್ಕೊಳಗಾಗುವ ಸಾಧ್ಯತೆಯೂ ಇದೆ.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...