ಭಾರತದ ಭವಿಷ್ಯದ ಹಿತ ದೃಷ್ಟಿಯಿಂದ ಸಶಸ್ತ್ರ ಸೇನಾ ಪಡೆಗಳು ಭದ್ರತಾ ಸವಾಲುಗಳನ್ನು ಎದುರಿಸಲು ಸಿದ್ಧವಾಗಿರಬೇಕು ರಕ್ಷಣಾ ಸಚಿವ ರಾಜನಾಥ್ ಸಿಂಗ್

38

“ಅನಿರೀಕ್ಷಿತ ಭೌಗೋಳಿಕ ರಾಜಕೀಯ ವಾತಾವರಣದ ದೃಷ್ಟಿಯಿಂದ ಅಲ್ಪಾವಧಿಯ ಸಂಘರ್ಷದಿಂದ ಹಿಡಿದು ಐದು ವರ್ಷಗಳ ಯುದ್ಧದವರೆಗೆ ಎಲ್ಲಾ ರೀತಿಯ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.

ಇಲ್ಲಿನ ಆರ್ಮಿ ವಾರ್ ಕಾಲೇಜ್‌ನಲ್ಲಿ ನಡೆದ ‘ಯುದ್ಧ ಕುರಿತ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವು ಯಾರ ಭೂಮಿಯನ್ನು ಬಯಸುವುದಿಲ್ಲ, ಆದರೆ ತನ್ನ ಪ್ರಾದೇಶಿಕ ಸಮಗ್ರತೆ ರಕ್ಷಿಸಲು ಯಾವುದೇ ಹಂತಕ್ಕೂ ಹೋಗಲು ಸಿದ್ಧವಾಗಿದೆ ಎಂದು ಹೇಳಿದರು. “ಇಂದಿನ ಯುಗದಲ್ಲಿ, ಯುದ್ಧಗಳು ತುಂಬಾ ಹಠಾತ್ ಮತ್ತು ಅನಿರೀಕ್ಷಿತವಾಗಿ ಮಾರ್ಪಟ್ಟಿವೆ. ಯಾವುದೇ ಯುದ್ಧವು ಯಾವಾಗ ಕೊನೆಗೊಳ್ಳುತ್ತದೆ ಮತ್ತು ಅದು ಎಷ್ಟು ಕಾಲ ಉಳಿಯುತ್ತದೆ ಎಂದು ಊಹಿಸಲು ತುಂಬಾ ಕಷ್ಟ” ಎಂದು ಸಿಂಗ್ ಹೇಳಿದರು.

ಭಾರತೀಯ ಸೇನೆಯು ಪ್ರತಿಯೊಂದು ಪರಿಸ್ಥಿತಿಗೂ ಸನ್ನದ್ಧವಾಗಿರಬೇಕು. ಅಲ್ವಾವಧಿಯಿಂದ ಹಿಡಿದು ಐದು ವರ್ಷಗಳವರೆಗೆ ಯಾವುದೇ ಯುದ್ಧ ಸಂಭವಿಸಿದ್ದರೂ ಅದಕ್ಕೆ ನಾವು ಸಂಪೂರ್ಣವಾಗಿ ಸಿದ್ಧರಾಗಿರಬೇಕು ಎಂದು ಅವರು ಹೇಳಿದರು. ರಾಷ್ಟ್ರೀಯ ಭದ್ರತೆಯು ಇನ್ನು ಮುಂದೆ ಮಿಲಿಟರಿಯ ವಿಷಯವಲ್ಲ. ಇದು ‘ಇಡೀ ರಾಷ್ಟ್ರದ ವಿಚಾರವಾಗಿದೆ ಎಂದು ಹೇಳಿದ ಸಚಿವರು, ಆಪರೇಷನ್ ಸಿಂಧೂರ್‌ನಲ್ಲಿ ಮೂರು ಸೇನೆಗಳು ತೋರಿದ ಸೇವೆಯನ್ನು ಶ್ಲಾಘಿಸಿದರು
. ಮೂರು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಸಂವಾದದಲ್ಲಿ ಉಪಸ್ಥಿತರಿದ್ದರು

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...