ಇರಾನ್ ಬೆಂಬಲಿತ ಹೌತಿ ಪ್ರಧಾನಿ,ಸೇರಿದಂತೆ ಹಲವು ಸಚಿವರ ಹತ್ಯೆ ಯೆಮೆನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ

71

ಕೈರೋ: ಯೆಮೆನ್‌ನ ರಾಜಧಾನಿ ಸನಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹೌತಿ ಬಂಡುಕೋರರ ಪ್ರಧಾನ ಮಂತ್ರಿಯ ಹತ್ಯೆಯಾಗಿದೆ ಎಂದು ಹೌತಿಗಳು ಶನಿವಾರ ಹೇಳಿದ್ದಾರೆ. ಅವರು ಇರಾನ್ ಬೆಂಬಲಿತ ಬಂಡುಕೋರರ ವಿರುದ್ಧ ಇಸ್ರೇಲಿ-ಯುಎಸ್ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಹೌತಿ ಅಧಿಕಾರಿಯೂ ಆಗಿದ್ದಾರೆ.


ಸನಾದಲ್ಲಿ ಗುರುವಾರ ನಡೆದ ದಾಳಿಯಲ್ಲಿ ಹಲವಾರು ಮಂತ್ರಿಗಳೊಂದಿಗೆ ಅಹ್ಮದ್ ಅಲ್-ರಹ್ವಿ ಕೊಲ್ಲಲ್ಪಟ್ಟರು ಎಂದು ಬಂಡುಕೋರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇತರ ಸಚಿವರು ಮತ್ತು ಅಧಿಕಾರಿಗಳು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.

ಹೌತಿ ಸರ್ಕಾರದ ಹಿರಿಯ ಅಧಿಕಾರಿಗಳು ಸೇರಿದ್ದ ಕಾರ್ಯಾಗಾರವೊಂದರ ಮೇಲೆ ನಡೆದಿದೆ. ಇದರಲ್ಲಿ ಅವರು ತಮ್ಮ ಕಳೆದ ವರ್ಷದ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತಿದ್ದರು ಎಂದು ಹೌತಿಗಳು ತಿಳಿಸಿದ್ದಾರೆ. ಈ ವೇಳೆ ದಾಳಿ ಮಾಡಲಾಗಿದ್ದು, ಪ್ರಧಾನಿ ಸೇರಿದಂತೆ ಹಲವು ಸಚಿವರು ಸಾವನಪ್ಪಿದ್ದಾರೆ.
  ಅಹ್ಮದ್ ಅಲ್-ರಹ್ವಿ ಯೆಮೆನ್‌ನ ಅಬ್ಯಾನ್ ಪ್ರಾಂತ್ಯದವರು ಮತ್ತು ಮಾಜಿ ಅಧ್ಯಕ್ಷ ಅಲಿ ಅಬ್ದುಲ್ಲಾ ಸಲೇಹ್‌ನ ಮಿತ್ರರಾಗಿದ್ದರು. 2014ರಲ್ಲಿ ಹೌತಿಗಳು ಸನಾವನ್ನು ವಶಪಡಿಸಿಕೊಂಡಾಗ, ಅವರನ್ನು ಆಗಸ್ಟ್ 2024ರಲ್ಲಿ ಪ್ರಧಾನ ಮಂತ್ರಿಯಾಗಿ ನೇಮಿಸಲಾಯಿತು. ಆದರೆ, ಅವರು ಹೌತಿ ನಾಯಕತ್ವದ ಒಳವಲಯದಲ್ಲಿ ಭಾಗವಾಗಿರಲಿಲ್ಲ ಮತ್ತು ಅವರ ಉಪಪ್ರಧಾನಿ ಮೊಹಮ್ಮದ್ ಮೊಫ್ತಾಹ್ ದೈನಂದಿನ ಆಡಳಿತವನ್ನು ನಿರ್ವಹಿಸುತ್ತಿದ್ದರು.

ಈ ದಾಳಿಯ ನಂತರ, ಮೊಫ್ತಾಹ್ ತಾತ್ಕಾಲಿಕ ಪ್ರಧಾನ ಮಂತ್ರಿಯ ಜವಾಬ್ದಾರಿಯನ್ನು ವಹಿಸಿಕೊಂಡರು. ಹೌತಿಗಳ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್‌ನ ಮುಖ್ಯಸ್ಥ ಮಹ್ದಿ ಅಲ್-ಮಶತ್ “ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಘೋಷಿಸಿದ್ದಾರೆ.
ಇಸ್ರೇಲ್ ಮತ್ತು ಕೆಂಪು ಸಮುದ್ರದಲ್ಲಿನ ಹಡಗುಗಳ ಮೇಲೆ ಬಂಡುಕೋರರ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿಕ ಮತ್ತು ಇಸ್ರೇಲ್ ಹೌತಿಗಳ ವಿರುದ್ಧ ತಮ್ಮ ವಾಯು ಮತ್ತು ನೌಕಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಯುಎಸ್ ಮತ್ತು ಇಸ್ರೇಲಿ ದಾಳಿಯಿಂದ ಯೆಮನ್ ನಲ್ಲಿ ಡಜನ್ ಗಟ್ಟಲೇ ಜನರ ಹತ್ಯೆಯಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ

ಟೆಹರಾನ್: ಅಮೆರಿಕ ಇರಾನ್ ಬಂದರುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಮತ್ತೆ ಉದ್ವಿಗ್ನತೆ...

ಹೊರ್ಮುಜ್ ಜಲಸಂಧಿ ಕದನ ವಿರಾಮದ ತಪ್ಪು ತಿಳುವಳಿಕೆಯಿಂದ ಅನುಮತಿ ಇಲ್ಲದೆ ಬಂದರೆ ನಿಮ್ಮ ಸರಕು ಸಾಗಾಣಿಕ ಹಡಗುಗಳನ್ನು ಹೊಡೆದುರುಳಿಸ್ತೀವಿ:: ಇರಾನ್ ಎಚ್ಚರಿಕೆ

ಟೆಹ್ರಾನ್: ಕದನ ವಿರಾಮ ಘೋಷಣೆಯಾಗಿದೆ ಎಂದು ಇಡೀ ಜಗತ್ತು ಖುಷಿ ಪಡ್ತಿದ್ರೆ… ಅದ್ಯಾಕೋ ಇರಾನ್ ಯುದ್ಧ...

 ಬ್ರಿಟನ್ ಆಹ್ವಾನದ ಮೇರೆಗೆ    ಹಾರ್ಮುಜ್ ಜಲಸಂಧಿಯ  ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾರತ ಭಾಗಿ

ನವದೆಹಲಿ: ಯುನೈಟೆಡ್ ಕಿಂಗ್‌ಡಮ್‌(ಬ್ರಿಟನ್)ನ ಆಹ್ವಾನದ ಮೇರೆಗೆ ಭಾರತವು ಹಾರ್ಮುಜ್ ಜಲಸಂಧಿಯ ಕುರಿತು ಅಂತರರಾಷ್ಟ್ರೀಯ ಮಾತುಕತೆಯಲ್ಲಿ ಭಾಗವಹಿಸುತ್ತಿದೆ...

ಯುಎಇ ಮೇಲೆ ಇರಾನ್ ಕ್ಷಿಪಣಿ ಮತ್ತು  ಡ್ರೋನ್ ದಾಳಿ ಐವರು ಐವರು ಭಾರತೀಯರಿಗೆ ಗಾಯ

“ಇರಾನ್‌ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕೈಗಾರಿಕಾ ವಲಯದಲ್ಲಿ ಭಾರೀ...