ಅಗ್ರಜ ಸೌಹಾರ್ದ ಸಹಕಾರಿ ಸಂಘ ನಿಯಮಿತ – ಸರ್ವಸದಸ್ಯರ ವಾರ್ಷಿಕ ಮಹಾಸಭೆ: 15% ಡಿವಿಡೆಂಡ್ ಘೋಷಣೆ

59

ಅಗ್ರಜ ಸೌಹಾರ್ದ ಸಹಕಾರಿಯ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಬನ್ನಂಜೆಯ “ಶ್ರೀ ನಾರಾಯಣ ಗುರುಸಭಾಭವನ” ಇಲ್ಲಿ ಅಗಸ್ಟ್ 30 ರ ಶನಿವಾರ ಸಹಕಾರಿಯ ಅಧ್ಯಕ್ಷರಾಗಿರುವ ಶ್ರೀ ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

2024-25ನೇ ಸಾಲಿನಲ್ಲಿ ಸಹಕಾರಿಯು ಸುಮಾರು 9 ಕೋಟಿ 56 ಲಕ್ಷ ರೂಪಾಯಿಗಿಂತಲೂ ಅಧಿಕ ದುಡಿಯುವ ಬಂಡವಾಳವನ್ನು ಹೊಂದಿದ್ದು ಈ ವರ್ಷ 17 ಲಕ್ಷ ರೂ. ಲಾಭ ಗಳಿಸಿ ಅತ್ಯುತ್ತಮವಾಗಿ ಮುನ್ನಡೆಯುತ್ತಿದ್ದು ಸದಸ್ಯರಿಗೆ ಶೇ. 15% ಡಿವಿಡೆಂಡ್ ಘೋಷಿಸಲಾಗಿದೆ. ಸಂಘವು ತನ್ನಲ್ಲಿರುವ ಠೇವಣಾತಿಗಳನ್ನು ಸಮರ್ಪಕವಾಗಿ ಸಾಲ ವಿತರಣೆ ಹಾಗೂ ಸುಸ್ಥಿರ ಹೂಡಿಕೆ ಮಾಡಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ.

ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಗಣೇಶ್ ಎನ್ ಕೋಟ್ಯಾನ್ ಇವರು 2024-25 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ. ನಿಯಮಿತ ಇದರ ಸೌಹಾರ್ದ ಅಭಿವೃದ್ಧಿ ಅಧಿಕಾರಿಯಾದ ಶ್ರೀ ವಿಜಯ್ ಬಿ. ಎಸ್. ಸಹಕಾರಿಯ ಉಪಾಧ್ಯಕ್ಷರಾದ ಶ್ರೀ ಮನೀಷ್ ಭಟ್, ನಿರ್ದೇಶಕರಾದ ಶ್ರೀ ನಂದಕಿಶೋರ್, ಶ್ರೀಮತಿ ರೋಹಿಣಿ ಜಿ. ಕೋಟ್ಯಾನ್, ಶ್ರೀಮತಿ ಪ್ರೇಮಾ ಕೆ ಶೆಟ್ಟಿ,

ಶ್ರೀ ಚಂದನ್ ಕುಮಾರ್, ಶ್ರೀ ನಾಗೇಶ್ ನಾಯಕ್, ಶ್ರೀ ಗಿರೀಶ್ ಶೇರಿಗಾರ್, ಶ್ರೀ ಶ್ರೀನಿವಾಸ ನಾಯ್ಕ, ಶ್ರೀ ಸದಾನಂದ ನಾಯಕ್ ಹಾಜರಿದ್ದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ 85% ಕ್ಕಿಂತ ಅಧಿಕ ಅಂಕ ಗಳಿಸಿದ ಸಹಕಾರಿಯ ಸದಸ್ಯರ ಹಾಗೂ ಸಿಬ್ಬಂದಿಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಹಕಾರಿಯ ಹಿರಿಯ ಸದಸ್ಯರಾದ ಶ್ರೀ ಕೆ ಗೋಪಾಲ ಭಟ್ ಹೆಬ್ರಿ, ಶ್ರೀ ಮಂಜುನಾಥ ಸರಳಾಯ, ಮೂಡುಬೆಳ್ಳೆ ಮತ್ತು ಅಗ್ರಜ ಸ್ವ ಸಹಾಯ ಗುಂಪಿನ ಪ್ರತಿನಿಧಿಯಾಗಿರುವ ಶ್ರೀಮತಿ ಸವಿತ ಕೆ ಹೆಬ್ರಿ ಇವರನ್ನು ಸನ್ಮಾನಿಸಲಾಯಿತು. ಕುಮಾರಿ ರಚಿತಾ ಕುಲಾಲ್ ಪ್ರಾರ್ಥನೆ ನೆರವೇರಿಸಿದರು.

ಹೆಬ್ರಿ ಶಾಖೆಯ ಶಾಖಾ ಪ್ರಬಂಧಕರಾದ ಶ್ರೀ ಕಿರಣ್ ಕುಮಾ‌ರ್ ಇವರು ಧನ್ಯವಾದ ಸಮರ್ಪಣೆ ನೆರವೇರಿಸಿದರು, ಮುಖ್ಯ ಕಛೇರಿಯ ಸಿಬ್ಬಂದಿಯಾಗಿರುವ ಶ್ರೀಮತಿ ಸವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Leave a comment

Leave a Reply

Your email address will not be published. Required fields are marked *

Related Articles

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು,...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ...