ಉಡುಪಿ ಚಿಕ್ಕಮಂಗಳೂರು ಸಂಸದರೆ ಪರ್ಕಳ ಮಣಿಪಾಲ್ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾರ್ಯ ಯಾವಾಗ;; ನವೀನ್ ಸಾಲಿಯಾನ್

113

ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಸೊಗಸಾದ ಮಾತುಗಾರಿಕೆಯಿಂದ ಜನರನ್ನು ಇಲ್ಲಿಯ ತನಕ ಮರಳು ಮಾಡಿದ್ದು ಬಿಟ್ಟರೆ ಯಾವುದೇ ರೀತಿಯ ಜನಪರ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಅವರು ಕೇವಲ ಭಾಷಣಕ್ಕೆ ಸೀಮಿತ ಹೊರತು ಅಭಿವೃದ್ಧಿ ಕೆಲಸ ಶೂನ್ಯ ಎಂದು ನವೀನ್ ಸಾಲಿಯಾನ್ ಹೇಳಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿಯವರು ಸಚಿವರಾಗಿದ್ದ ವೇಳೆ ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ಪಡಿತರದಲ್ಲಿ ನೀಡುವ ಭರವಸೆ ನೀಡಿದ್ದರು. ಪರಿಶಿಷ್ಟ ಪಂಗಡದ ಜನರಿಗೆ ಮನೆ ನಿರ್ಮಾಣಕ್ಕೆ ರೂ 5ಲಕ್ಷದಂತೆ ಅನುದಾನ ಒದಗಿಸುವುದಾಗಿ ಹೇಳಿದ್ದರು ಆದರೆ ಇಲ್ಲಿಯ ವರೆಗೆ ಅವರು ಅದನ್ನು ಜಾರಿ ಮಾಡಿಸುವಲ್ಲಿ ಸೋತಿದ್ದಾರೆ. ಕೇವಲ ಬಾಯಿಚಪಲಕ್ಕೆ ಭಾಷಣಗಳ ಮೂಲಕ ಜನರನ್ನು ಮರಳು ಮಾಡಿದ್ದು ಬಿಟ್ಟರೆ ಅವರ ಅವಧಿಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ.

ಇಂದ್ರಾಳಿ ಬ್ರಿಡ್ಜ್ ಅಂತು ಸಂಸದರ ಪ್ರವಾಸಿ ತಾಣವಾಗಿ ಮಾರ್ಪಟ್ಟಂತೆ ಕಾಣುತ್ತಿದೆ ಹೊರತು ಕಾಮಗಾರಿ ಪೂರ್ಣ ಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ.ಕೇಂದ್ರ ಸರಕಾರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಬಿಲ್ಲವರ ಆರಾಧ್ಯ ದೈವ ಎನಿಸಿಕೊಂಡಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ನಿಷೇಧ ಮಾಡಿದಾಗಲೂ ಕೂಡ ಅದೇ ಬಿಲ್ಲವ ಸಮುದಾಯದ ನಾಯಕ ಎನಿಸಿಕೊಂಡ ಕೋಟರ ಬಾಯಿಗೆ ಬೀಗ ಹಾಕಿತ್ತು. ಈಗ ಪರ್ಕಳ ರಸ್ತೆ ತೀರ್ವ ಹದಗೆಟ್ಟಿದ್ದು ಸದ್ಯ ವಾಹನ ಸವಾರರು ಹೈರಾಣಾಗಿ ಹೋಗಿದ್ದು,ಉಡುಪಿ ಮಣಿಪಾಲ್ ಆಸ್ಪತ್ರೆಗೆ ಇದೇ ಮಾರ್ಗವಾಗಿ ಬರುವುದರಿಂದ ರೋಗಿಗಳು ಹಾಗೂ ಸಾರ್ವಜನಿಕರು ದಿನ ಹಿಡಿಶಾಪ ಹಾಕುವಂತ ಪರಿಸ್ಥಿತಿ ಉಂಟಾಗಿದೆ.ಗರ್ಬಿಣಿ ಸ್ತ್ರೀಯರು ಈ ರಸ್ತೆಯಲ್ಲಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಹೋಗುವಾಗ ಸಂಸದರಾದ ಶ್ರೀನಿವಾಸ್ ಪೂಜಾರಿ ಅವರು ನಾಮಕಾವಸ್ಥೆಗೆ ಸಂಸದರಾಗಿದ್ದಾರೆ ಉಡುಪಿಯ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು ದೂರುವಂತ ಸನ್ನಿವೇಶ ಎದುರಾಗಿದೆ.

ಈ ಬಾರಿ ಆರು ತಿಂಗಳಲ್ಲಿ ಹಿಂದಿ ಕಲಿತು ಬಾಷಣ ಮಾಡುತ್ತೇನೆ ಎಂದು ಹೇಳಿದ್ದಿರಿ ಆದ್ದರಿಂದ ಈ ಬಾರಿ ಲೋಕಸಭೆಯ ಅಧಿವೇಶನದಲ್ಲಿ ಹಿಂದಿಯಲ್ಲಿ ಮಾನ್ಯ ಸಾರಿಗೆ ಸಚಿವರಿಗೆ ಪರ್ಕಳ ರಸ್ತೆ ದುರಸ್ತಿ ಮಾಡುವ ನಿಟ್ಟಿನಲ್ಲಿ ಸಚಿವರ ಗಮನ ಸೆಳೆಯಿರಿ. ಅದನ್ನಾದರೂ ಮಾಡಿ ಶೀಘ್ರ ಪರ್ಕಳ ರಸ್ತೆಯನ್ನು ದುರಸ್ತಿ ಮಾಡಿ ಸುಗಮ ಸಂಚಾರಕ್ಕಾಗಿ ಅನುವು ಮಾಡಿ ಕೊಡಿ ಎಂದು ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...