ಉಡುಪಿ ಜಿಲ್ಲೆಯ ಉಪ್ಪೂರು, ತೆಂಕಬೆಟ್ಟು ಮೂಲದ ರಂಜಿತ್ ಗಾಣಿಗ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನವನ್ನು ಪಡೆದು ರಾಜ್ಯದ ಗೌರವವನ್ನು ಹೆಚ್ಚಿಸಿದ್ದಾರೆ.

ಗೋವಾದಲ್ಲಿ ಆರು ದಿನಗಳ ಕಾಲ ನಡೆದ ಈ ಪ್ರತಿಷ್ಠಿತ ರಾಷ್ಟ್ರೀಯ ವೇದಿಕೆಯಲ್ಲಿ ಅವರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆಯುವುದರ ಜೊತೆಗೆ, ಬೆಸ್ಟ್ ಫಿಸಿರ್ಕ್ಯೂ ಹಾಗೂ ಬೆಸ್ಟ್ ಪರ್ಸನಾಲಿಟಿ ಎಂಬ ಎರಡು ವಿಶೇಷ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಈ ಸಾಧನೆಯೊಂದಿಗೆ, ರಂಜಿತ್ ಗಣಿಗ ಅವರು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಲು ಸಜ್ಜಾಗಿದ್ದು, ತಮ್ಮ ಪ್ರತಿಭೆಯ ಜೊತೆಗೆ ದೇಶದ ಸಂಸ್ಕೃತಿ ಹಾಗೂ ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ತೋರಿಸಲು ಮುಂದಾಗಿದ್ದಾರೆ.

ತಮ್ಮ ಸಾಧನೆಯ ಕುರಿತು ಅಭಿಪ್ರಾಯ ಹಂಚಿಕೊಂಡ ರಂಜಿತ್ ಗಣಿಗ ಹೇಳಿದರು: “ಕರ್ನಾಟಕವನ್ನು ಪ್ರತಿನಿಧಿಸಿ ಇದೀಗ ಭಾರತವನ್ನು ಪ್ರತಿನಿಧಿಸುವ ಅವಕಾಶ ದೊರೆತಿರುವುದು ನನಗೆ ಹೆಮ್ಮೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಕೃತಜ್ಞ. ಇದು ಕೇವಲ ಆರಂಭ, ಮುಂದಿನ ದಿನಗಳಲ್ಲಿ ನನ್ನ ದೇಶದ ಹೆಸರನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆಪಡುವಂತೆ ಮಾಡುವ ಜವಾಬ್ದಾರಿಯಿದೆ” ಎಂದು ಹೇಳಿದರು.

Leave a comment