ಉಡುಪಿ ಜಿಲ್ಲಾ ಕಾರಾಗೃಹದಲ್ಲಿ  ಖೈದಿಯಿಂದ ಸಹಖೈದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲು

36

ವಿಜಯಕುಮಾರ್ ಚವ್ಹಾಣ ಇವರು ಜಿಲ್ಲಾ ಕಾರಾಗೃಹ ಕಾಜರಗುತ್ತುಹಿರಿಯಡ್ಕ ಉಡುಪಿ ಇಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತಿರುವ ಸಂದರ್ಭದಲ್ಲಿ ಕಾರಾಗೃಹದಲ್ಲಿರುವ ವಿಚಾರಣಾದೀನ  ಕೈದಿ  ಇಸಾಕ್ ಎಂಬುವವನು

ಬೆಳಿಗ್ಗೆ 7:45ರ ವೇಳೆಯಲ್ಲಿ ಏಕಾಎಕಿ  ಖೈದಿ  ರವಿಚಂದ್ರನ್ ಎಂಬುವವನ ಮೇಲೆ ಕೈಯಲ್ಲಿ ಸ್ಟೀಲ್ ಚೆಂಬು ಸಿಕ್ಕಿಸಿಕೊಂಡು ಹಿಂದಿನಿಂದ ತಲೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಕರ್ತವ್ಯ ನಿರತ ಸಿಬ್ಬಂದಿಯವರು ಓಡಿ ಹೋಗಿ ನೋಡಲಾಗಿ ಸದರಿ ಇಸಾಕ್ ಎಂಬ ಖೈದಿ ಕೈಯಲ್ಲಿ ಚೆಂಬು ಸಿಕ್ಕಿಸಿಕೊಂಡಿದ್ದನ್ನು ತೆಗೆಸಿ  ವಿಚಾರಿಸಲಾಗಿ ರೂಮಿನಲ್ಲಿ ವಾಕಿಂಗ್ ಮಾಡುತ್ತಿದ್ದಾನೆಂಬ ಕ್ಷುಲ್ಲಕ ಕಾರಣ ನೀಡಿರುತ್ತಾನೆ.

ಹಲ್ಲೆಗೊಳಗಾದ ರವಿಚಂದ್ರನ್ ಎಂಬವರ ಎಡಕಿವಿಯ ಹಿಂಭಾಗದ ತಲೆಯಲ್ಲಿ ರಕ್ತಗಾಯವಾಗಿದ್ದು ಚಿಕಿತ್ಸೆಯ ಬಗ್ಗೆ  ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ವಿಚಾರಣಾ ಬಂದಿ  ಇಸಾಕ್ ಇತನು ವಿನಾಃ ಕಾರಣ ಸಹಬಂದಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು ಕಾರಾಗೃಹ ನಿಯಮಗಳನ್ನು ಉಲ್ಲಂಘನೆ ಮಾಡಿರುವುದಾಗಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

 

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...