ನೈಋತ್ಯ ರೈಲ್ವೆ  ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮತ್ತು ಕೆಲ ರೈಲಿನ ಸೇವಾ ದಿನಗಳಲ್ಲಿ ವರ್ಗ ಮತ್ತು ಸಂಖ್ಯೆಗಳಲ್ಲಿ ಬದಲಾವಣೆ

43

ಈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ ನೈಋತ್ಯ ರೈಲ್ವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ ಮಾಡಿದೆ. ಜೊತೆಗೆ ರೈಲಿನ ವರ್ಗ ಮತ್ತು ಸಂಖ್ಯೆಗಳಲ್ಲಿ ಕೂಡ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗದ ರೈಲಿನ ಸೇವಾ ದಿನ, ಸಮಯ ಸೇರಿದಂತೆ ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ.  

ಬೆಂಗಳೂರು, ಸೆಪ್ಟೆಂಬರ್ 18: ನೈಋತ್ಯ ರೈಲ್ವೆ  ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಸೇವಾ ದಿನಗಳಲ್ಲಿ ಬದಲಾವಣೆ ಸೇರಿದಂತೆ ಕೆಲ ರೈಲಿನ ವರ್ಗ ಮತ್ತು ಸಂಖ್ಯೆಗಳಲ್ಲಿ ಬದಲಾವಣೆ ಮಾಡಿದೆ. ಆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಮತ್ತಷ್ಟು ಅನುಕೂಲ ಮಾಡಿಕೊಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗದ ರೈಲಿನ ಸೇವಾ ದಿನ, ಸಮಯ ಸೇರಿದಂತೆ ಇತರೆ ಮಾಹಿತಿ ಇಲ್ಲಿದೆ. ಕಾಚಿಗುಡ-ಯಶವಂತಪುರ-ಕಾಚಿಗುಡ ದಕ್ಷಿಣ ಮಧ್ಯ ರೈಲೆಯು ರೈಲು ಸಂಖ್ಯೆ (20703/20704) ಕಾಚಿಗುಡ-ಯಶವಂತಪುರ-ಕಾಚಿಗುಡ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸೇವಾ ದಿನಗಳನ್ನು ಪರಿಷ್ಕರಿಸಿದೆ. ಪ್ರಸ್ತುತ, ಈ ರೈಲು ಬುಧವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಸಂಚರಿಸುತ್ತದೆ. ಇದನ್ನೂ ಓದಿ ಬೆಂಗಳೂರಿನ ರಿಂಗ್ ರೋಡ್ನಲ್ಲಿ 1 ವಾರ ವಾಹನ ಸಂಚಾರ ನಿಷೇಧ! ದಸರಾ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಕರ್ನಾಟಕದ ವಿವಿಧೆಡೆಗೆ ದಸರಾ ವಿಶೇಷ ರೈಲುಗಳು: ವೇಳಾಪಟ್ಟಿ ಇಲ್ಲಿದೆ ಹುಬ್ಬಳ್ಳಿ ಜೋಧಪುರ್‌ ನಡುವೆ ನೇರ ರೈಲು: ಟಿಕೆಟ್ ಬುಕಿಂಗ್ ಶುರು ನೈರುತ್ಯ ರೈಲ್ವೆ ಟ್ವೀಟ್ ಡಿಸೆಂಬರ್ 4ರಿಂದ ಈ ರೈಲು ಇನ್ಮುಂದೆ ಶುಕ್ರವಾರ ಹೊರತುಪಡಿಸಿ ವಾರದ ಉಳಿದ ಎಲ್ಲಾ ದಿನಗಳಲ್ಲಿ ಸೇವೆ ಒದಗಿಸಲಿವೆ. ರೈಲಿನ ವೇಳಾಪಟ್ಟಿ, ನಿಲುಗಡೆಗಳು, ಆವರ್ತನ ಮತ್ತು ಬೋಗಿಗಳ ಸಂಖ್ಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ರೈಲಿನ ವರ್ಗ ಮತ್ತು ಸಂಖ್ಯೆಗಳಲ್ಲಿ ಬದಲಾವಣೆ ದಕ್ಷಿಣ ರೈಲ್ವೆಯು ರೈಲು ಸಂಖ್ಯೆ (12678/12677) ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ಡಿಸೆಂಬರ್ 3ರಿಂದ ಎಕ್ಸ್‌ಪ್ರೆಸ್ ವರ್ಗಕ್ಕೆ ಬದಲಾಯಿಸಿ, ಅದರ ಸಂಖ್ಯೆಗಳನ್ನು ಪರಿಷ್ಕರಿಸಿದೆ.

ಬೆಂಗಳೂರಿನ ರಿಂಗ್ ರೋಡ್ನಲ್ಲಿ 1 ವಾರ ವಾಹನ ಸಂಚಾರಕ್ಕೆ ನಿರ್ಬಂಧ: ಇಲ್ಲಿದೆ ಪರ್ಯಾಯ ಮಾರ್ಗ ಇದರ ಪ್ರಕಾರ, ರೈಲು ಸಂಖ್ಯೆ (12678) ಎರ್ನಾಕುಲಂ- ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಇನ್ಮುಂದೆ ರೈಲು ಸಂಖ್ಯೆ (16378) ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಆಗಿ ಸಂಚರಿಸಲಿದೆ. ಅದೇ ರೀತಿ, ರೈಲು ಸಂಖ್ಯೆ (12677) ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ರೈಲು ಸಂಖ್ಯೆ (16377) ಬೆಂಗಳೂರು-ಎರ್ನಾಕುಲಂ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ. 

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...