ಯಾವುದೇ ಅಣ್ವಸ್ತ್ರ ದಾಳಿಯ ಬೆದರಿಕೆಗಳಿಗೆ ಭಾರತ ಬಗ್ಗುವುದಿಲ್ಲ : ನರೇಂದ್ರ ಮೋದಿ

34

ಇದು ನವಭಾರತ, ಅಣ್ವಸ್ತ್ರ ದಾಳಿಗೆ ಬೆದರಲ್ಲ: ಮಧ್ಯಪ್ರದೇಶದಲ್ಲಿ ನರೇಂದ್ರ ಮೋದಿ ಗುಡುಗು ಪ್ರಧಾನಿ ಮೋದಿ ಅವರು ‘ಆಪರೇಷನ್ ಸಿಂದೂರ’ದ ಯಶಸ್ಸನ್ನು ಶ್ಲಾಘಿಸಿದ್ದು, ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತದ ದಿಟ್ಟತನವನ್ನು ಎತ್ತಿ ತೋರಿಸಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ‘ಪಿಎಂ ಮಿತ್ರ’ ಪಾರ್ಕ್‌ಗೆ ಶಂಕುಸ್ಥಾಪನೆ ನೆರವೇರಿಸಿ, ಸ್ವದೇಶಿ ವಸ್ತುಗಳ ಖರೀದಿಗೆ ಕರೆ ನೀಡಿದ್ದಾರೆ. ಈ ಯೋಜನೆಯಿಂದ 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಆಪರೇಷನ್‌ ಸಿಂದೂರ ಶ್ಲಾಘಿಸಿದ ಪ್ರಧಾನಿ ನಮ್ಮ ಯೋಧರು ಕಣ್ಣು ಮಿಟುಕಿಸುವುದರೊಳಗೆ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದರು,” ಎಂದು ಸೇನೆಯ ಪರಾಕ್ರಮವನ್ನು ಶ್ಲಾಘಿಘಿಸಿದರು. ಜಾಮೀಯಾ ಮಸೀದಿ ಸುಭಾನ್‌ ಅಲ್ಲಾ’ ಕಟ್ಟಡದ ಮೇಲೆ ನಡೆಸಿದ ದಾಳಿಗೆ ಜೈಷೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬ ಸರ್ವನಾಶ ಮಧ್ಯಪ್ರದೇಶದಲ್ಲಿ ನರೇಂದ್ರ ಮೋದಿ

ಭೋಪಾಲ್‌: ”ಇದು ನವ ಭಾರತ. ಯಾವುದೇ ಅಣ್ವಸ್ತ್ರ ದಾಳಿಯ ಬೆದರಿಕೆಗಳಿಗೆ ಬಗ್ಗುವುದಿಲ್ಲ. ತಂಟೆಗೆ ಬಂದ ಉಗ್ರರ ನೆಲೆಗಳಿಗೆ ನುಗ್ಗಿ ಹೊಡೆದಿದ್ದೇವೆ,” ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು. ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್‌ ಟೆಕ್ಸ್ಟ್‌ಟೈಲ್‌ ರೀಜನ್‌ ಆ್ಯಂಡ್‌ ಅಪ್ಯಾರೆಲ್‌’ (ಪಿಎಂ-ಮಿತ್ರ) ಪಾರ್ಕ್ಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ”ಆಪರೇಷನ್‌ ಸಿಂದೂರ ಕಾರ್ಯಾಚರಣೆಗೆ ಜೈಷೆ ಮೊಹಮ್ಮದ್‌ ಉಗ್ರ ಅಜರ್‌ ಮಸೂದ್‌ ಕುಟುಂಬ ಸರ್ವನಾಶವಾಗಿದ್ದನ್ನು ಸ್ವತಃ ಜೈಷೆ ಮೊಹಮ್ಮದ್‌ ಕಮಾಂಡರ್‌ ಒಪ್ಪಿಕೊಂಡಿರುವುದು ನವ ಭಾರತದ ತಾಕತ್ತು ಏನು ಎಂಬುದನ್ನು ಜಗತ್ತಿಗೆ ತೋರಿಸಿದೆ,”  ಐಸಿಸಿ ಮುಂದೆ ನಡೆಯದ ಹೈಡ್ರಾಮಾ ”ಪಾಕಿಸ್ತಾನ ಪೋಷಿತ ಉಗ್ರರು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ನಮ್ಮ ಸಹೋದರಿಯರ ಸಿಂದೂರ ಅಳಿಸಿ ದುಷ್ಟತನ ಮೆರೆದರು. ಈ ಹೇಡಿತನದ ಕೃತ್ಯಕ್ಕೆ ಭಾರತವು ‘ಆಪರೇಷನ್‌ ಸಿಂದೂರ’ ಮೂಲಕ ದಿಟ್ಟ ಉತ್ತರ ನೀಡಿತು.

ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಉಡಾಯಿಸುವ ಮೂಲಕ ಅವರ ಹುಟ್ಟಡಗಿಸಿದೆವು. ನಮ್ಮ ಯೋಧರು ಕಣ್ಣು ಮಿಟುಕಿಸುವುದರೊಳಗೆ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿದರು,” ಎಂದು ಸೇನೆಯ ಪರಾಕ್ರಮವನ್ನು ಶ್ಲಾಘಿಸಿದರು. ಜೈಷ್‌ ಕಮಾಂಡರ್‌ ಮಸೂದ್‌ ಇಲ್ಯಾಸ್‌ ಕಾಶ್ಮೀರಿಯು, ”ಮೇ 7ರಂದು ಭಾರತದ ರಕ್ಷಣಾ ಪಡೆಗಳು ಪಾಕಿಸ್ತಾನದ ಬಹವಲ್ಪುರದಲ್ಲಿ ಜೈಷೆ ಕೇಂದ್ರ ಕಚೇರಿ ಎನಿಸಿದ ‘ಜಾಮೀಯಾ ಮಸೀದಿ ಸುಭಾನ್‌ ಅಲ್ಲಾ’ ಕಟ್ಟಡದ ಮೇಲೆ ನಡೆಸಿದ ದಾಳಿಗೆ ಜೈಷೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬ ಸರ್ವನಾಶವಾಯಿತು,” ಎಂದು ಹೇಳಿದ್ದ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಮೋದಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.”

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...