ಹಿಂದುಳಿದ ಆಯೋಗದ ಸದಸ್ಯರಿಂದಲೇ ಜಾತಿ ಗಣತಿಗೆ ವಿರೋಧ! ಅಧ್ಯಕ್ಷರ ಕಾರ್ಯವೈಖರಿ ಬಗ್ಗೆಯೂ ಆಕ್ಷೇಪ ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಯ ಪರ ವಿರೋಧದ ನಡುವೆ, ಹಿಂದುಳಿದ ಆಯೋಗದ ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆಯೇ ಈಗ ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ. ಜಾತಿ ಪಟ್ಟಿಯಲ್ಲಿನ ಗೊಂದಲಗಳನ್ನು ನಿವಾರಿಸದೆ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಆಕ್ಷೇಪಣೆಗಳು ಬಂದಿವೆ. ಸಂಪುಟ ಸಭೆಯಲ್ಲಿಯೂ ಈ ವಿಷಯವಾಗಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದು, ಸಮೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಾತಿ ಗಣತಿಯಲ್ಲಿ ಆಗಿರುವ ತಪ್ಪುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸದಸ್ಯರೊಬ್ಬರು ಆಂತರಿಕವಾಗಿ ಪತ್ರವನ್ನು ಬರೆದಿದ್ದಾರೆ ಜಾತಿ ಪಟ್ಟಿಯಲ್ಲಿ ಇರುವ ಗೊಂದಲ ನಿವಾರಣೆ ಮಾಡಿ ಸಮೀಕ್ಷೆ ನಡೆಸಿ ಎಂಬ ಬೇಡಿಕೆಯನ್ನು ಸದಸ್ಯರು ಇಟ್ಟಿದ್ದಾರೆ ಹಿಂದೂ ಜಾತಿಗಳ ಮುಂದೆ ಕಿಶ್ಚಿಯನ್ ಸೇರ್ಪಡೆ ಮಾಡುವ ಅಗತ್ಯ ಏನಿದೆ? ಎಂಬ ಪ್ರಶ್ನೆಯನ್ನು ಕೆಲವು ಸದಸ್ಯರು ಮಾಡುತ್ತಿದ್ದಾರೆ ಆಯೋಗದ ಅಧ್ಯಕ್ಷರ ಬಗ್ಗೆ ಹಿಂದುಳಿದ ವರ್ಗಗಳ ಆಯೊಗಕ್ಕೆ ಅಸಮಾಧಾನ

ಬೆಂಗಳೂರು: ಜಾತಿ ಗಣತಿ ಸಮೀಕ್ಷೆಯ ಬಗ್ಗೆ ರಾಜ್ಯದಲ್ಲಿ ಪರ ವಿರೋಧ ಅಭಿಪ್ರಾಯಗಳು ತೀವ್ರಗೊಂಡಿವೆ. ಈ ನಡುವೆ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆಯೂ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ. ಜಾತಿ ಗಣತಿಯಲ್ಲಿ ಆಗಿರುವ ತಪ್ಪುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸದಸ್ಯರೊಬ್ಬರು ಆಂತರಿಕವಾಗಿ ಪತ್ರವನ್ನು ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರು ಜಾತಿ ಗಣತಿ ಸಮೀಕ್ಷೆ ಮಾಡಿಯೇ ತೀರುವ ಹಠಕ್ಕೆ ಬಿದ್ದಿದ್ದಾರೆ. ಆದರೆ ಆಯೋಗದ ಸದಸ್ಯರಲ್ಲಿ ಇದರ ಬಗ್ಗೆ ಅಸಮಾಧಾನ ಇದೆ. ಜಾತಿ ಪಟ್ಟಿಯಲ್ಲಿ ಇರುವ ಗೊಂದಲ ನಿವಾರಣೆ ಮಾಡಿ ಸಮೀಕ್ಷೆ ನಡೆಸಿ ಎಂಬ ಬೇಡಿಕೆಯನ್ನು ಸದಸ್ಯರು ಇಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.”

Leave a comment