ಧರ್ಮಸ್ಥಳ ಪ್ರಕರಣ ಇಂದು  ಮೂರನೇ ಬಾರಿ ನ್ಯಾಯಾಲಯದಲ್ಲಿ ಚಿನ್ನಯ್ಯನ ಹೇಳಿಕೆ

30

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಸಾಕ್ಷಿ ಚಿನ್ನಯ್ಯ, ಆರೋಪಿಯಾಗಿ ಜೈಲು ಸೇರಿದ್ದು, ಸೆಪ್ಟೆಂಬರ್ 23 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಹೇಳಿಕೆ ದಾಖಲಿಸಲಿದ್ದಾನೆ. ಈ ಹಿಂದೆ ಆತನ ಹೇಳಿಕೆ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆದಿತ್ತು.

ಚಿನ್ನಯ್ಯನನ್ನು ಸೆ.23ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ. ಚಿನ್ನಯ್ಯ ಆರಂಭದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಹೇಳಿಕೆ ದಾಖಲಿಸಿದ್ದ ಮೂರನೇ ಬಾರಿಗೆ ಆತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾನೆ.

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣದ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯನನ್ನು ಸೆ.23ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ. ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದು, ಆತನನ್ನು ಸೆ.18ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆತ ಬಿಎನ್‌ಎಸ್‌ಎಸ್‌ 183 ಅಡಿಯಲ್ಲಿಹೇಳಿಕೆ ನೀಡುವುದಾಗಿ ನ್ಯಾಯಾಧೀಶರ ಮುಂದೆ ತಿಳಿಸಿದ್ದ.

ಅದಕ್ಕೆ ನ್ಯಾಯಾಧೀಶರು ಸೆ.23ಕ್ಕೆ ದಿನಾಂಕ ನಿಗದಿಪಡಿಸಿದ್ದರು. ಇದೀಗ ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಚಿನ್ನಯ್ಯ ಆರಂಭದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಹೇಳಿಕೆ ದಾಖಲಿಸಿದ್ದ. ಇದರ ಆಧಾರದ ಮೇಲೆಯೇ ಎಸ್‌ಐಟಿ ರಚನೆಯಾಗಿ ತನಿಖೆ ನಡೆದಿತ್ತು. ಇದಾದ ಬಳಿಕ ಬುರುಡೆ ವಿಚಾರದಲ್ಲಿ ಚಿನ್ನಯ್ಯನನ್ನು ಎಸ್‌ಐಟಿ ಬಂಧಿಸಿದ ಬಳಿಕ ಮತ್ತೊಮ್ಮೆ ಆತನ ಹೇಳಿಕೆ ದಾಖಲಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಆತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾನೆ.”

Leave a comment

Leave a Reply

Your email address will not be published. Required fields are marked *

Related Articles

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...

ಅಲ್ಪಸಂಖ್ಯಾತರ ಸಾಲದ ಬಡ್ಡಿ ಮನ್ನಾ ತುಷ್ಟಿಕರಣದಲ್ಲಿ ತೊಡಗಿಕೊಂಡ ಸರಕಾರದ ವಿರುದ್ಧ:: ಸಿಟಿ ರವಿ ವಾಗ್ದಾಳಿ

“ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಸಿದ್ದರಾಮಯ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು, ಹಿಂದುಳಿದ...