ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ಸಾಕ್ಷಿ ಚಿನ್ನಯ್ಯ, ಆರೋಪಿಯಾಗಿ ಜೈಲು ಸೇರಿದ್ದು, ಸೆಪ್ಟೆಂಬರ್ 23 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಹೇಳಿಕೆ ದಾಖಲಿಸಲಿದ್ದಾನೆ. ಈ ಹಿಂದೆ ಆತನ ಹೇಳಿಕೆ ಆಧಾರದ ಮೇಲೆ ಎಸ್ಐಟಿ ತನಿಖೆ ನಡೆದಿತ್ತು.

ಚಿನ್ನಯ್ಯನನ್ನು ಸೆ.23ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ. ಚಿನ್ನಯ್ಯ ಆರಂಭದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಹೇಳಿಕೆ ದಾಖಲಿಸಿದ್ದ ಮೂರನೇ ಬಾರಿಗೆ ಆತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾನೆ.

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣದ ಸಾಕ್ಷಿ ದೂರುದಾರನಾಗಿ ಬಂದು ಇದೀಗ ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯನನ್ನು ಸೆ.23ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಆತನ ಹೇಳಿಕೆ ದಾಖಲಿಸುವ ಕಾರ್ಯ ನಡೆಯಲಿದೆ. ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದು, ಆತನನ್ನು ಸೆ.18ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆತ ಬಿಎನ್ಎಸ್ಎಸ್ 183 ಅಡಿಯಲ್ಲಿಹೇಳಿಕೆ ನೀಡುವುದಾಗಿ ನ್ಯಾಯಾಧೀಶರ ಮುಂದೆ ತಿಳಿಸಿದ್ದ.

ಅದಕ್ಕೆ ನ್ಯಾಯಾಧೀಶರು ಸೆ.23ಕ್ಕೆ ದಿನಾಂಕ ನಿಗದಿಪಡಿಸಿದ್ದರು. ಇದೀಗ ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಚಿನ್ನಯ್ಯ ಆರಂಭದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಮುಚ್ಚಿದ ಕೋಣೆಯಲ್ಲಿ ಹೇಳಿಕೆ ದಾಖಲಿಸಿದ್ದ. ಇದರ ಆಧಾರದ ಮೇಲೆಯೇ ಎಸ್ಐಟಿ ರಚನೆಯಾಗಿ ತನಿಖೆ ನಡೆದಿತ್ತು. ಇದಾದ ಬಳಿಕ ಬುರುಡೆ ವಿಚಾರದಲ್ಲಿ ಚಿನ್ನಯ್ಯನನ್ನು ಎಸ್ಐಟಿ ಬಂಧಿಸಿದ ಬಳಿಕ ಮತ್ತೊಮ್ಮೆ ಆತನ ಹೇಳಿಕೆ ದಾಖಲಿಸಲಾಗಿತ್ತು. ಇದೀಗ ಮೂರನೇ ಬಾರಿಗೆ ಆತ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲಿದ್ದಾನೆ.”
Leave a comment