ವಿಮಾನ ನಿಲ್ದಾಣದ ಉದ್ಘಾಟನೆಗೆ ಸಿದ್ಧವಾಗುತ್ತಿರುವ ವಿಜಯಪುರ

43

“ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ವೇಗದ ಸಿದ್ಧತೆ: ಆಸ್ಟ್ರಿಯಾದಿಂದ ಬಂದ ಅಗ್ನಿಶಾಮಕ ವಾಹನ! ಇನ್ನೊಂದೇ ಹೆಜ್ಜೆ ಬಾಕಿ ವಿಜಯಪುರ ವಿಮಾನ ನಿಲ್ದಾಣದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಅಗತ್ಯದ ಪಟ್ಟಿಯಲ್ಲಿದ್ದ, ಅಗ್ನಿಶಾಮಕ ವಾಹನವನ್ನು ಆಸ್ಟ್ರಿಯಾದಿಂದ 24 ಕೋಟಿ ರೂಪಾಯಿ ವೆಚ್ಚದಲ್ಲಿ ತರಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದು, ವಿಮಾನ ನಿಲ್ದಾಣದ ಉದ್ಘಾಟನೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಆಸ್ಟ್ರಿಯಾದಿಂದ ಹಡಗಿನಲ್ಲಿ ಮುಂಬೈಗೆ ಬಂದಿಳಿದ ಈ ವಾಹನಗಳನ್ನು, ಅಲ್ಲಿಂದ ಟ್ರಕ್ ಮೂಲಕ ವಿಜಯಪುರಕ್ಕೆ ಸಾಗಿಸಿಕೊಂಡು ಬರಲಾಗಿದೆ

ವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಅಗ್ನಿಶಾಮಕ ವಾಹನಗಳು ಕಂಪ್ಯೂಟರೀಕೃತವಾಗಿದ್ದು, ಜಾಗತಿಕ ಟೆಂಡರ್ ಅಡಿಯಲ್ಲಿ ಆಸ್ಟ್ರಿಯಾದಿಂದ ಪೂರೈಕೆಯಾಗಿವೆ.

ಇವುಗಳ ಬೆಲೆ ಅಂದಾಜು 24 ಕೋಟಿ ರೂಪಾಯಿ. ಇವು ತುರ್ತು ಸಂದರ್ಭಗಳಲ್ಲಿ 160 ಮೀಟರಿನವರೆಗೂ ನೀರನ್ನು ಹಾಯಿಸಿ, ಬೆಂಕಿಯನ್ನು ನಂದಿಸುವ ಸಾಮರ್ಥ್ಯ ಹೊಂದಿವೆ. ಈ ಮೂಲಕ ನಾಗರಿಕ ವಿಮಾನಯಾನ ಮಹಾ‌ ನಿರ್ದೇಶನಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೇಳಿದ್ದ ಮತ್ತೊಂದು ಅಗತ್ಯ ಪೂರೈಸಲಾಗಿದೆ ಎಂದಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...