ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಲು ವಿಶೇಷ ರೈಲು ವ್ಯವಸ್ಥೆ

57

ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ವ್ಯವಸ್ಥೆ ರಾಜ್ಯದಿಂದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಿದೆ. 

ನವದೆಹಲಿ: ರಾಜ್ಯದಿಂದ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಬೆಂಗಳೂರು ಮಾರ್ಗವಾಗಿ ಹಾಗೂ ಕೃಷ್ಣರಾಜಪುರಂ, ಬಂಗಾರಪೇಟ್, ಸೇಲಂ, ಇರೋಡ್‌, ತಿರುಪುರ, ಪೊದನೂರ, ತ್ರಿಸ್ಸೂರ, ಅಲುವಾ, ಎರ್ನಾಕುಲಂ ಟೌಣ್‌, ಕೊಟ್ಟಯಾಂ, ಚಂಗನಸ್ಸೇರಿ, ತಿರುವಳ್ಳಾ, ಚೆಂಗನ್ನೂರ್‌, ಕರುನಾಗಪಲ್ಲಿ, ಸಸ್ಥನಕೊಟ್ಟಾ ಮಾರ್ಗದಲ್ಲಿ ಈ ವಿಶೇಷ ರೈಲು ಸಂಚರಿಸಲಿದೆ.

ರೈಲು ಸಂಖ್ಯೆ 07313 ಸೆ.28ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿಯಿಂದ ಸಂಚರಿಸಲಿದ್ದರೆ, ರೈಲು ಸಂಖ್ಯೆ 07314 ಸೆ.29ರಿಂದ ಪ್ರತಿ ಸೋಮವಾರ ಸಂಜೆ 5 ಗಂಟೆಗೆ ಕೊಲ್ಲಂನಿಂದ ಸಂಚಾರ ಆರಂಭಿಸಲಿದೆ. ದಸರಾ ಹಬ್ಬದ ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸೇರಿದಂತೆ, ರಾಜ್ಯದಿಂದ ಸಂಚರಿಸುವ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ವ್ಯವಸ್ಥೆಗಾಗಿ ಭಾರತೀಯ ಅಯ್ಯಪ್ಪ ಸೇವಾ ಸಂಘ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರ ಗಮನ ಸೆಳೆದು ವಿಶೇಷ ರೈಲು ಸಂಚಾರ ಸೇವೆ ಕಲ್ಪಿಸಿದ್ದಾರೆ.

ಅಯ್ಯಪ್ಪ ಸೇವಾ ಸಂಘದಿಂದ ಸಚಿವರಿಗೆ ಅಭಿನಂದನೆ ಇದೇ ವೇಳೆ ಸಚಿವ ಪ್ರಲ್ಹಾದ ಜೋಶಿ ಅವರು ತಮ್ಮ ಮನವಿಗೆ ಸ್ಪಂದಿಸಿ ರಾಜ್ಯದ ಶ್ರೀ ಅಯ್ಯಪ್ಪ ಭಕ್ತರಿಗೆ ವಿಶೇಷ ರೈಲು ಒದಗಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇತ್ತ ಭಾರತೀಯ ಅಯ್ಯಪ್ಪ ಸೇವಾ ಸಂಘದವರೂ ಸಹ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ನೈರುತ್ಯ ರೈಲ್ವೆ ವಲಯದ ಅಧಿಕಾರಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಸಚಿವ ಸ್ಥಾನಗಳಿಗಾಗಿ ಲಾಬಿ ಮಾಡುವವರನ್ನು ಪಕ್ಷ ಸಹಿಸುವುದಿಲ್ಲ. ಲಾಬಿಗಳಿಗೆ ಮಣಿಯಬೇಡಿ- ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ಜುಲೈ ಮೊದಲ ವಾರದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಮಯದಲ್ಲಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...