ಚನ್ನಪಟ್ಟಣದ ಜಾನಪದ ಲೋಕದ ವೈಭವ ಮರಳಿ ತರಲು ಸಚಿವ ತಂಗಡಗಿ ಅವರಿಗೆ ಮನವಿ

23

ರಾಮನಗರ ಜಿಲ್ಲೆ ಚನ್ನಪಟ್ಟಣದ ಬಳಿ ಇರುವ ಜಾನಪದ ಲೋಕಕ್ಕೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕಮ್ಮಿಯಾಗಿದೆ. ಸುಮಾರು ಹದಿನೈದು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಇಲ್ಲಿ ರಾಜ್ಯದ ವಿವಿಧ ಪ್ರದೇಶಗಳಿಂದ ಸಂಗ್ರಹಿಸಿದ ಲಕ್ಷಾಂತರ ಜನಪದ ವಸ್ತುಗಳಿವೆ. ಆದರೆ, ಹೆದ್ದಾರಿ ಮೇಲ್ದರ್ಜೆಗೆ ಏರಿದ ನಂತರ ಇದರ ವೈಭವ ಕಮ್ಮಿಯಾಗಿದೆ. ಅದಕ್ಕಾಗಿ, ಸಂಘಟನೆಗಳು, ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದೆ.

ಜಾನಪದ ಲೋಕದಲ್ಲಿ ಜನರಿಗೆ ಕರ್ನಾಟಕದ ಹಳ್ಳಿಯ ಜೀವನಶೈಲಿಯ ಸುಂದರ ಪರಿಚಯ ಕರ್ನಾಟಕದ ಜಾನಪದ ಕಲೆ, ಸಂಸ್ಕೃತಿಯನ್ನು ಸಂರಕ್ಷಿಸುವ ಮತ್ತು ಪ್ರಚಾರ ಮಾಡುವ ವಸ್ತುಸಂಗ್ರಹಾಲಯ ಜಾನಪದ ಲೋಕದ ವೈಭವ ಮರಳಿ ತರಲು ಸಚಿವ ತಂಗಡಗಿ ಅವರಿಗೆ ಮನವಿ ಜನಪದ ಲೋಕದ ವೈಭವ ಮರಳಿ ತರಲು ಸಚಿವ ತಂಗಡಗಿ ಅವರಿಗೆ ಮನವಿ

ರಾಮನಗರ : ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿನ ಚನ್ನಪಟ್ಟಣದ ಬಳಿ ಇರುವ ಜಾನಪದ ಲೋಕಕ್ಕೆ ಪ್ರವಾಸಿಗರನ್ನು ಆಕರ್ಷಿಸಲು, ಹೊಸ ಯೋಜನೆಗೆ ಕರ್ನಾಟಕ ರಾಜ್ಯ ಟ್ರಾವೆಲ್ಸ ಮಾಲೀಕರ ಸಂಘ ಹಾಗೂ ಬೆಂಗಳೂರಿನ ಹೋಟೆಲ್ ಮಾಲಿಕರ ಸಂಘ, ಸಿದ್ದರಾಮಯ್ಯನವರ ಸರ್ಕಾರದ ಸಚಿವರಿಗೆ ಮನವಿಯನ್ನು ಸಲ್ಲಿಸಿದೆ.

ಮೈಸೂರು ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೆ ಏರಿ ಮೇಲ್ಸೇತುವೆ ನಿರ್ಮಾಣವಾದ ಬಳಿಕ ಚನ್ನಪಟ್ಟಣದ ಪಕ್ಕದಲ್ಲಿರುವ ಜಾನಪದ ಲೋಕದ ವೈಭವಕ್ಕೆ ಧಕ್ಕೆ ಉಂಟಾಗಿದೆ. ಪ್ರವಾಸಿಗರನ್ನೇ ಅವಲಂಬಿತವಾಗಿದ್ದರಿಂದ, ಈಗ ಜನರ ಭೇಟಿ ಗಣನೀಯವಾಗಿ ಇಳಿಮುಖಗೊಂಡ ಹಿನ್ನಲೆಯಲ್ಲಿ ಇದರ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ ಎಂದು ಸಂಘ ಆತಂಕವನ್ನು ವ್ಯಕ್ತ ಪಡಿಸಿದೆ.”

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...