ಸಮೀಕ್ಷೆ ಅರ್ಥಪೂರ್ಣ ವಾಗಿರಲಿ – ವಿರೋಧ ಪಕ್ಷದ ನಾಯಕ ಆರ್. ಅಶೋಕ್

20

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ವೈಮಾನಿಕ ಸಮೀಕ್ಷೆ ಫೋಟೋ ಶೂಟ್ ಔಟ್ ಆಗದಿರಲಿ ಎಂದ ಆರ್.ಅಶೋಕ ವಿಮಾನ ಟೇಕಾಫ್ ಆಗುವ ಮುನ್ನ ಪರಿಹಾರದ ಹಣ ಟೇಕಾಫ್ ಆಗಲಿ ಎಂದ ವಿಪಕ್ಷದ ನಾಯಕ ಸಿಎಂ ವೈಮಾನಿಕ ಸಮೀಕ್ಷೆ ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಸಿದ್ದರಾಮಯ್ಯ ಇಂದು (ಸೆ. 30) ವೈಮಾನಿಕ ಸಮೀಕ್ಷೆಯನ್ನು ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕಲಬುರಗಿಗೆ ಹೋಗುವ ಸಿಎಂ, ಅಲ್ಲಿಂದ ವಿಜಯಪುರ, ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಸಮೀಕ್ಷೆಯನ್ನು ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ವೈಮಾನಿಕ ಸಮೀಕ್ಷೆಗೆ ಹೊರಡುವ ಮುನ್ನ, ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್.ಅಶೋಕ, ಕೆಲವೊಂದು ಸಲಹೆಯನ್ನು ನೀಡಿದ್ದಾರೆ. ವೈಮಾನಿಕ ಸಮೀಕ್ಷೆಯು, ಫೋಟೋ ಸೆಸನ್ ಗೆ ಸೀಮಿತವಾಗದಿರಲಿ ಎನ್ನುವ ಸಲಹೆಯನ್ನು ನೀಡಿದ್ದಾರೆ. ಅವರು, ಮಾಡಿರುವ ಟ್ವೀಟ್ ಹೀಗಿದೆ:  

ಸೂರ್ಯಕುಮಾರ್ ಯಾದವ್ ಪ್ರಗಾಢ ನಿದ್ದೆಯಲ್ಲಿದ್ದ ನಿಮ್ಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು ನಿಮ್ಮ ವೈಮಾನಿಕ ಸಮೀಕ್ಷೆಯ “ಫೋಟೋ ಶೂಟ್” ಅಲ್ಲ, ತುರ್ತು ಪರಿಹಾರ. ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ನಿಮ್ಮ ವೈಮಾನಿಕ ಸಮೀಕ್ಷೆ ಮತ್ತೊಂದು ‘ಕಾಟಾಚಾರದ ಸಮೀಕ್ಷೆ’ ಆಗಬಾರದು ಎನ್ನುವುದು ಅಲ್ಲಿನ ಜನರ ನಿರೀಕ್ಷೆ. ಈ ನಿಟ್ಟಿನಲ್ಲಿ ನಿಮ್ಮ ವಿಮಾನ ಟೇಕಾಫ್ ಆಗುವ ಮುನ್ನ, ಪರಿಹಾರ ಕಾರ್ಯ ಟೇಕಾಫ್ ಆಗಲಿ ಎನ್ನುವ ಉದ್ದೇಶದಿಂದ ನಿಮ್ಮ ಸರ್ಕಾರಕ್ಕೆ ನನ್ನ ಆಗ್ರಹಗಳು:

1) ಪ್ರತಿ ಕುಟುಂಬಕ್ಕೆ 50,000 ರೂಪಾಯಿ ತುರ್ತು ಪರಿಹಾರ ಇಂದೇ ಘೋಷಿಸಿ: ಕಳೆದ ವರ್ಷಗಳಂತೆ ‘ಸಾಫ್ಟ್‌ವೇರ್ ಲೋಪ’, ‘ಸರ್ವರ್ ಡೌನ್’, ಇನ್ನೊಂದು ಮತ್ತೊಂದು ಕುಂಟು ನೆಪ ಹೇಳುವುದನ್ನು ಬಿಟ್ಟು, ಕಾಳಜಿ ಕೇಂದ್ರಗಳಲ್ಲಿರುವ ಪ್ರತಿ ಸಂತ್ರಸ್ತ ಕುಟುಂಬಕ್ಕೆ ಈ ಕೂಡಲೇ ₹50,000 ತುರ್ತು ಪರಿಹಾರ ಹಣ ಬಿಡುಗಡೆ ಮಾಡಿ ಪರಿಹಾರ ವಿಳಂಬ ಮಾಡಿ ನೆರೆ ಸಂತ್ರಸ್ತರು ದೀಪಾವಳಿಯನ್ನು ಕತ್ತಲೆಯಲ್ಲಿ ಕಳೆಯುವಂತೆ ಮಾಡಬೇಡಿ.

2) ಸ್ಪಾಟ್ ಪರಿಶೀಲನೆ, ಸ್ಪಾಟ್ ಚೆಕ್ ವಿತರಣೆ ಆಗಲಿ: ನೆರೆ ಕಡಿಮೆಯಾದ ಕೂಡಲೇ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ತಂಡ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ, ಬೆಳೆ, ಆಸ್ತಿಪಾಸ್ತಿ, ಜಾನುವಾರು ನಷ್ಟದ ಸಮಗ್ರ ಸಮೀಕ್ಷೆ ನಡೆಸಬೇಕು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಾನು ಕಂದಾಯ ಸಚಿವನಾಗಿದ್ದಾಗ ಅಂದಿನ ಸಿಎಂ ಯಡಿಯೂರಪ್ಪನವರು ಸ್ಥಳದಲ್ಲೇ ಚೆಕ್ ವಿತರಣೆ ಮಾಡಿದ್ದರು. ಕಾಂಗ್ರೆಸ್ ಸರ್ಕಾರವೂ ಅದೇ ರೀತಿ ಮಾಡಿ ಸ್ಥಳದಲ್ಲೇ ಚೆಕ್ ವಿತರಣೆ ಮಾಡಬೇಕು.

3) ಸಾಂಕ್ರಾಮಿಕ ರೋಗ ಭೀತಿ, ಆರೋಗ್ಯ ಇಲಾಖೆ ಎಚ್ಚೆತ್ತುಕೊಳ್ಳಲಿ: ಪ್ರವಾಹ ಇಳಿದ ಮೇಲೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿರುತ್ತದೆ. ಆದ್ದರಿಂದ ಆರೋಗ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕು. ಮೊಬೈಲ್ ಆರೋಗ್ಯ ವ್ಯಾನ್‌ಗಳನ್ನು ಪ್ರತಿ ಗ್ರಾಮಕ್ಕೆ ಕಳುಹಿಸುವ ಮೂಲಕ ಅರಿವು ಮೂಡಿಸಬೇಕು, ಅಗತ್ಯ ಔಷಧಿಗಳ ಬೃಹತ್ ಶೇಖರಣೆ ಮಾಡಿಕೊಳ್ಳುವ ಜೊತೆಗೆ ಸಾಂಕ್ರಾಮಿಕ ರೋಗಗಳು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.

4) ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ನೀಡಿ ಕಲ್ಯಾಣ ಕರ್ನಾಟಕದ ಜನ ಸಂಕಷ್ಟದಲ್ಲಿರುವ ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಈ ಭಾಗದ ಜನರ ನೋವಿಗೆ ಸ್ಪಂದಿಸಬೇಕು. ಕಲ್ಯಾಣ ಕರ್ನಾಟಕಕ್ಕೆ 10,000 ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಘೋಷಣೆ ಮಾಡುವುದು ಮಾತ್ರವಲ್ಲ ಅದನ್ನು ಬಿಡುಗಡೆ ಮಾಡಿ ಪುನರ್ನಿರ್ಮಾಣ, ಪುನರ್ವಸತಿ ಕೆಲಸಗಳಿಗೆ ಬಳಸಿಕೊಳ್ಳಬೇಕು.

5) ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಇರಲಿ: ಕಳೆದ ಎರಡು ವರ್ಷಗಳಲ್ಲಿ ನೆರೆ, ಬರ ಪರಿಸ್ಥಿತಿಗಳು ಉಂಟಾದಾಗ ಪರಿಹಾರ ವಿತರಣೆಯಲ್ಲಿ ಹಲವಾರು ಸಂತ್ರಸ್ತರು ಬಿಟ್ಟುಹೋಗಿರುವ, ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಅಲೆದಾಟ ನಡೆಸಿರುವ ಅನೇಕ ಉದಾಹರಣೆಗಳು ಇವೆ.

ಈ ಬಾರಿಯಾದರೂ ಯಾರೂ ಪರಿಹಾರದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು. ಅರ್ಹ ಸಂತ್ರಸ್ತರಿಗೆ ಪರಿಹಾರ ತಲುಪಿದ ಬಗ್ಗೆ ಸಂಪೂರ್ಣ ಮಾಹಿತಿ ಸಾರ್ವಜನಿಕವಾಗಿ ಲಭ್ಯವಾಗಬೇಕು ಪರಿಹಾರ ಕಾರ್ಯಗಳಲ್ಲಿ ಯಾವುದೇ ರಾಜಕೀಯ ದುರುಪಯೋಗ, ಭ್ರಷ್ಟಾಚಾರ ಆಗದಂತೆ ಎಚ್ಚರವಹಿಸಬೇಕು. ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ವೈಮಾನಿಕ ಸಮೀಕ್ಷೆಯ ‘ಫ್ಲೈಟ್ ಟೇಕ್ ಆಫ್’ ಆಗುವ ಮುನ್ನ, ನಿಮ್ಮ ಪರಿಹಾರ ಕಾರ್ಯ ‘ಟೇಕ್ ಆಫ್’ ಆಗಲಿ. ಇದೇ ಉತ್ತರ ಕರ್ನಾಟಕದ ಜನರ ಆಗ್ರಹ.

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...