ಅಕ್ಟೋಬರ್ 3 ಅಥವಾ 4 ರಿಂದ ಬೆಂಗಳೂರು ಪ್ರದೇಶದಲ್ಲಿ ಜಾತಿ ಗಣತಿ ಪ್ರಾರಂಭ

30

ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಜಾತಿ ಗಣತಿ ಅಕ್ಟೋಬರ್ 3 ಅಥವಾ 4 ರಿಂದ ಪ್ರಾರಂಭ 17 ಸಾವಿರ ನೌಕರರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದ ಆಯುಕ್ತರು ಪ್ರತಿಯೊಂದು ವಾರ್ಡ್‌ಗೆ 80 – 90 ಮಂದಿ ಗಣತಿದಾರರ ನೇಮಕ, 32 ಲಕ್ಷ ಮನೆಗಳಲ್ಲಿ ಸಮೀಕ್ಷೆ ಬೆಂಗಳೂರು ನಗರದಲ್ಲೂ ಸದ್ಯದಲ್ಲೇ ಜಾತಿ ಗಣತಿ ಆರಂಭವಾಗಲಿದೆ.

ಬೆಂಗಳೂರು: ರಾಜ್ಯದೆಲ್ಲೆಡೆ ಜಾತಿ ಗಣತಿ ಆರಂಭವಾಗಿದ್ದರೂ ಇನ್ನೂ ಗ್ರೇಟರ್‌ ಬೆಂಗಳೂರು ಪ್ರದೇಶದ (ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭವಾಗಿಲ್ಲ. ಇದೇ ಅಕ್ಟೋಬರ್‌ 3 ಅಥವಾ 4ರಿಂದ ಗಣತಿ ಆರಂಭವಾಗಲಿದ್ದು, ಈಗಾಗಲೇ ಗಣತಿದಾರರಿಗೆ ತರಬೇತಿ ನೀಡಲಾಗುತ್ತಿದೆ. ” ಮತದಾರರ ಪಟ್ಟಿ ಪರಿಷ್ಕರಣೆ ಜತೆಗೆ ಸಮೀಕ್ಷೆಗೂ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ. ಹೀಗಾಗಿ, ಬೇರೆ ಬೇರೆ ಇಲಾಖೆಗಳಿಗೆ ನೋಟಿಸ್‌ ನೀಡಿ ಸುಮಾರು 17 ಸಾವಿರ ನೌಕರರನ್ನು ಸಮೀಕ್ಷಾ ಕಾರ್ಯಕ್ಕೆ ಪಡೆಯಲಾಗಿದೆ. ಅಕ್ಟೋಬರ್‌ 3ರಂದು ಅಂತಿಮ ತರಬೇತಿ ನೀಡಿ, ಅದೇ ದಿನ ಸಮೀಕ್ಷೆಗೆ ವಾರ್ಡ್‌ವಾರು ಸಿಬ್ಬಂದಿಯನ್ನು ನಿಯೋಜಿಸಲಾಗುವುದು,” ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

”ಪ್ರತಿಯೊಂದು ವಾರ್ಡ್‌ಗೆ 80 – 90 ಮಂದಿ ಗಣತಿದಾರರನ್ನು ಸಮೀಕ್ಷೆಗೆ ನೇಮಿಸಲಾಗುತ್ತಿದೆ. ನಗರದಲ್ಲಿ 32 ಲಕ್ಷ ಮನೆಗಳಿದ್ದು, ಪ್ರತಿಯೊಬ್ಬ ಗಣತಿದಾರರು 250 ಮನೆಗಳ ಸಮೀಕ್ಷೆ ನಡೆಸಲಿದ್ದಾರೆ. ಗಣತಿದಾರರು ಮನೆಗೆ ಬಂದಾಗ ನಿವಾಸಿಗಳು ಆಧಾರ್‌, ಪಡಿತರ ಚೀಟಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಹಕರಿಸಬೇಕು,” ಎಂದು ಅವರು ಮನವಿ ಮಾಡಿಕೊಂಡರು. ಜಾತಿ ಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌! ಏನಂದ್ರು ಸಿಎಂ? ”ಸಮೀಕ್ಷೆಯನ್ನು 10 ರಿಂದ 15 ದಿನಗಳೊಳಗೆ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.

ವಿಶೇಷ ಚೇತನರು, ಅನಾರೋಗ್ಯ ಪೀಡಿತರು ಸೂಕ್ತ ದಾಖಲೆ ಸಲ್ಲಿಸಿದರೆ ಸಮೀಕ್ಷಾ ಕರ್ತವ್ಯದಿಂದ ವಿನಾಯಿತಿ ನೀಡಲಾಗುವುದು. ಮದುವೆ, ಸಾವಿನ ಪ್ರಕರಣಗಳಲ್ಲೂ ವಿನಾಯಿತಿ ಕೊಡಲಾಗುತ್ತದೆ. ಉಳಿದವರು ಸಮೀಕ್ಷೆಗೆ ಗೈರಾದರೆ, ಶಿಸ್ತು ಕ್ರಮ ಜರುಗಿಸಲಾಗುತ್ತದೆ,” ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಎಚ್ಚರಿಕೆ ನೀಡಿದರು. ”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...