ಎಲ್ಲಾ ಸರಕಾರಿ ನೌಕರರಿಗೆ  ಗುಡ್‌ನ್ಯೂಸ್‌ ನೀಡುವತ್ತ ಕೇಂದ್ರ ಸರ್ಕಾರ

24

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ 3ರಷ್ಟು ತುಟ್ಟಿಭತ್ಯೆ (ಡಿಎ, ಡಿಆರ್‌) ಹೆಚ್ಚಳಕ್ಕೆ ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡುವ ಸಾಧ್ಯತೆ ಇದೆ.

ಹಣದುಬ್ಬರ ಪರಿಣಾಮ ತಗ್ಗಿಸಿ, ಜೀವನ ಮಟ್ಟ ಸುಧಾರಿಸಲು ಇದು ಸಹಕಾರಿ. ದೀಪಾವಳಿ ಹಬ್ಬದ ಸನಿಹದಲ್ಲಿ ನಿರೀಕ್ಷಿಸಲಾಗಿದ್ದ ಈ ಘೋಷಣೆ ವಿಳಂಬವಾಗಿದೆ. 18,000 ರೂ. ಮೂಲ ವೇತನ ಪಡೆಯುವವರಿಗೆ ತಿಂಗಳಿಗೆ 540 ರೂ. ಹೆಚ್ಚುವರಿ ಸಿಗಲಿದ್ದು, ನೌಕರರ ಸಂಘಗಳು ಡಿಎ ಹೆಚ್ಚಳ ವಿಳಂಬದ ಬಗ್ಗೆ ಕಳವಳ ವ್ಯಕ್ತಪಡಿಸಿವೆ.

ಹೈಲೈಟ್ಸ್‌: ಕೇಂದ್ರ ಸರ್ಕಾರವು ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ. ತುಟ್ಟಿಭತ್ಯೆ ಶೇಕಡಾ 3 ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡುವ ಸಾಧ್ಯತೆ. ಈಗಾಗಲೇ ಕೇಂದ್ರ ಸರ್ಕಾರ ರೈಲ್ವೆ ನೌಕರರಿಗೆ ಕಾರ್ಯಕ್ಷಮತೆ ಆಧಾರಿತ ಬೋನಸ್ ಅನ್ನು ಅನುಮೋದಿಸಿದೆ.

ಹೊಸದಿಲ್ಲಿ: ರೈಲ್ವೆ ನೌಕರರಿಗೆ ಭರ್ಜರಿ ಬೋನಸ್‌ ನೀಡಿದ ಕೇಂದ್ರ ಸರ್ಕಾರವು ಇತರೆ ಎಲ್ಲಾ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಬುಧವಾರ ಕೇಂದ್ರ ಕ್ಯಾಬಿನೆಟ್ ತುಟ್ಟಿ ಭತ್ಯೆಯನ್ನು (ಡಿಎ, ಡಿಆರ್‌) ಶೇಕಡಾ 3 ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಹೆಚ್ಚಳವು ಹಣದುಬ್ಬರದ ಪರಿಣಾಮಗಳನ್ನು ತಗ್ಗಿಸಲು ಮತ್ತು ನೌಕರರ ಜೀವನ ಮಟ್ಟ ಸುಧಾರಣೆಗೆ ಸಹಾಯ ಮಾಡುತ್ತದೆ. ದೀಪಾವಳಿ ಹಬ್ಬದ ಸನಿಹದಲ್ಲಿ ಈ ಘೋಷಣೆ ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ಅಧಿಸೂಚನೆಯಲ್ಲಿ ಸ್ವಲ್ಪ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ಟೈಮ್‌ ಆಫ್‌ ಇಂಡಿಯಾ ವರದಿ ಮಾಡಿದೆ.”

Leave a comment

Leave a Reply

Your email address will not be published. Required fields are marked *

Related Articles

ಫೆಬ್ರವರಿ 1 ಕೇಂದ್ರ ಬಜೆಟ್: ನಿರ್ಮಲಾಸೀತಾರಾಮನ್ ಹಣಕಾಸು ಸಚಿವೆ ಆಗಿ ಸತತವಾಗಿ ಒಂಬತ್ತನೆಯ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಒಂಬತ್ತನೆಯ ಬಾರಿಗೆ ಬಜೆಟ್‌ ಮಂಡನೆ...

ಸಾಲ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ, ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ ಪ್ರಕಟ

ಹೊಸದಿಲ್ಲಿ : ಸಾಲ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ, ರಿಸರ್ವ್ ಬ್ಯಾಂಕ್ ಕರಡು ಮಾರ್ಗಸೂಚಿ ಪ್ರಕಟ ಯಾವುದೇ...

ಪ್ರತಿ ಡಾಲರ್ ಗೆ 91.07 ರೂ. ಇದ್ದ ರುಪಾಯಿ ಮೌಲ್ಯ ತ್ವರಿತವಾಗಿ ಚೇತರಿಕೆ

ಮುಂಬೈ : ಸತತ 10 ದಿನಗಳಿಂದ ಇಳಿಕೆಯಾಗಿದ್ದ ರುಪಾಯಿ ಮೌಲ್ಯ ಡಿ. 17ರಂದು ಕೊಂಚ ಏರಿಕೆ....

 ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು

ಬೆಂಗಳೂರು:  ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು ಮಲ್ಲೇಶ್ವರಂ ಪೊಲೀಸರಿಂದ ಸ್ವಯಂಪ್ರೇರಿತ...