ಮನೆಗಳಿಂದ ನೇರವಾಗಿ ತ್ಯಾಜ್ಯ ಸಂಗ್ರಹಿಸಲು ಸೂಚನೆ ಉತ್ತರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್

36

ಬೆಂಗಳೂರು: ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಬೆಂಗಳೂರು ನಗರ ಉತ್ತರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಂಗಳವಾರ ಸೂಚನೆ ನೀಡಿದರು.

ಪುಲಕೇಶಿ ನಗರ ವಿಭಾಗದಲ್ಲಿ, ವಿಶೇಷವಾಗಿ ಕಾವೇರಿ ನಗರ, ಮುನಿಸ್ವಾಮಪ್ಪ ಕಾಲೋನಿ ಮತ್ತು ಆದರ್ಶ ನಗರ ಕಾಲೋನಿ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಉತ್ತರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಪರಿಶೀಲನೆ ನಡೆಸಿದರು.

ತ್ಯಾಜ್ಯ ಸಂಗ್ರಹಣಾ ವಾಹನಗಳು ಮನೆ-ಮನೆಗಳಿಂದ ಕಸ ಸಂಗ್ರಹಿಸುತ್ತಿಲ್ಲ ಎಂಬ ಪುಲಕೇಶಿ ನಗರ ವಿಭಾಗದ ಕಲ್ಯಾಣ ಅಭಿವೃದ್ಧಿ ಸಂಘಗಳಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಖಾಲಿ ಜಾಗಗಳಲ್ಲಿ ತ್ಯಾಜ್ಯವನ್ನು ಸುರಿಯುವುದನ್ನು ತಡೆಯಲು ನಿವಾಸಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದರು. ”

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....