ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದ ಯುವಕನನ್ನು  13 ವರ್ಷಗಳ ಬಳಿಕ ಪತ್ತೆ ಮಾಡಿ ಪೋಷಕರ ಸಂತಸಕ್ಕೆ ಕಾರಣರಾದ ಉಡುಪಿ ಪೊಲೀಸರು

56

ಯಾವುದೇ ಸುಳಿವು ನೀಡದೆ 13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ  ಯುವಕನನ್ನು ಬೆಂಗಳೂರಿನಿಂದ ಪತ್ತೆ ಹಚ್ಚಿ ಪೋಷಕರ ಜೊತೆ ಸೇರಿಸಿದ ಉಡುಪಿ ಜಿಲ್ಲಾ ಪೊಲೀಸ್ 2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.


2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟು ಹೋದ ಅನಂತಕೃಷ್ಣ ಪ್ರಭು ಬಳಿಕ ಮನೆಗೆ ವಾಪಸ್ಸಾಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಕುರಿತು ಅನಂತ ಕೃಷ್ಣ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117/2012 ಅಡಿ ಪ್ರಕರಣ ದಾಖಲಾಗಿತ್ತು.


ವರ್ಷಗಳ ಕಾಲ ಯಾವುದೇ ಸುಳಿವಿಲ್ಲದ ಹಿನ್ನೆಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಪೊಲೀಸರ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಕೊನೆಗೆ ಅನಂತ ಕೃಷ್ಣ ಪ್ರಭು ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು ಅವರನ್ನು ಪತ್ತೆಹಚ್ಚಿದೆ.

ಸುಮಾರು 13 ವರ್ಷಗಳ ಬಳಿಕ ಪತ್ತೆಯಾದ ಈ ಪ್ರಕರಣದಲ್ಲಿ ಕಾರ್ಯಚರಣೆ ನಡೆಸಿದ ತಂಡದಲ್ಲಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ., ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಸುದರ್ಶನ್ ದೊಡ್ಮನಿ, ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಈರಣ್ಣ ಶಿರಗುಂಪಿ, ಹಾಗೂ ಸಿಬ್ಬಂದಿಗಳಾದ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಇದ್ದರು.


ಪರೀಕ್ಷೆಯಲ್ಲಿ ಫೇಲ್!: ಅನಂತ ಕೃಷ್ಣ‌ಮೂರ್ತಿ ಪ್ರಥಮ ಪಿಯುಸಿ ಪರೀಕ್ಷೆಯೊಂದರಲ್ಲಿ ಅನುತ್ತೀರ್ಣನಾಗಿದ್ದರಿಂದ ಕಾಲೇಜಿನಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಸೂಚಿಸಿದ್ದರು. ಇದರಿಂದ‌ ಭಯಗೊಂಡ ಅನಂತ ಕೃಷ್ಣಮೂರ್ತಿ ಮನೆಯಲ್ಲಿ‌ ವಿಷಯ ಪ್ರಸ್ತಾಪಿಸದೆ,‌ ಮನೆಯವರಿಗೆ ಹೆದರಿ ಬೆಂಗಳೂರಿಗೆ ತೆರಳಿದ್ದನು. ಬೆಂಗಳೂರಿನಲ್ಲಿ ಅವರಿವರ ಸಹಕಾರದಿಂದ ಕೆಲಸ‌ ಮಾಡುತ್ತಾ ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಂಡು ಸದ್ಯ ಯಶಸ್ವಿ ಇಂಟೀರಿಯರ್ ಡಿಸೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾನೆ.

ಒಟ್ಟಿನಲ್ಲಿ 13 ವರ್ಷಗಳಿಂದ‌ ನಾಪತ್ತಯಾಗಿದ್ದ ಅನಂತ ಕೃಷ್ಣಮೂರ್ತಿ ಅವರನ್ನು ವಿವಿಧ ಆಯಾಮಗಳಲ್ಲಿ ತನಿಖೆ‌ ನಡೆಸಿ ಪತ್ತೆ ಹಚ್ಚಿ ನಾಪತ್ತೆ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ”

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...