ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

60

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು.

1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಓಡಾಡಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು.

ನವಿ ಮುಂಬೈ ವಿಮಾನ ನಿಲ್ದಾಣಕ್ಕೆ ಏರೋಡ್ರೋಮ್ ಲೈಸೆನ್ಸ್ ನೀಡಿದ DGCA  ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.

ಇದು ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ.

ಇದೇ ವೇಳೆ ಪ್ರಧಾನಿ ಮೋದಿ, ಅತ್ರೆ ಚೌಕ್‌ನಿಂದ ಕಫೆ ಪೆರೇಡ್‌ವರೆಗೆ ವಿಸ್ತರಿಸಿರುವ ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಅನ್ನು ಉದ್ಘಾಟಿಸಿದರು. ಇದನ್ನು 12,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾರ್ವಜನಿಕ ಸಾರಿಗೆ ನಿರ್ವಾಹಕರಲ್ಲಿ ಸಂಯೋಜಿತ ಮೊಬೈಲ್ ಟಿಕೆಟಿಂಗ್ ಸೇರಿದಂತೆ ಪ್ರಯಾಣಿಕರಿಗೆ ಹಲವಾರು ಪ್ರಯೋಜನಗಳನ್ನು ನೀಡುವ ಮುಂಬೈ ಒನ್ ಅಪ್ಲಿಕೇಶನ್ ಅನ್ನು ಸಹ ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಮಹಾರಾಷ್ಟ್ರದಲ್ಲಿ ಕೌಶಲ್ಯ, ಉದ್ಯೋಗ, ಉದ್ಯಮಶೀಲತೆ ಮತ್ತು ನಾವೀನ್ಯತೆ ಇಲಾಖೆಯ ಅಲ್ಪಾವಧಿಯ ಉದ್ಯೋಗಾವಕಾಶ ಕಾರ್ಯಕ್ರಮ(STEP)ಕ್ಕೂ ಪ್ರಧಾನಿ ಚಾಲನೆ ನೀಡಿದರು”

Leave a comment

Leave a Reply

Your email address will not be published. Required fields are marked *

Related Articles

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...

ಹೈದರಾಬಾದ್‌: ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂ ವಂಚನೆ ಆರೋಪ ಪ್ರಕರಣ ದಾಖಲು

ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ತನ್ನದೇ ಜನಪದ ಮತ್ತು ಸಿನಿಮಾ ಹಾಡುಗಳಿಂದ ಖ್ಯಾತಿಗಳಿಸಿರುವ ಗಾಯಕಿ...