ಸರ್ಕಾರಗಳ ನಿರ್ಲಕ್ಷ್ಯದಿಂದ ಶಿಥಿಲಗೊಂಡಿರುವ ಸಂಗೀತ ಸಾಮ್ರಾಜ್ಞಿ ಗಂಗೂಬಾಯಿ ಹಾನಗಲ್ ಅವರ ನಿವಾಸ

24

ಶೋಚನೀಯ ಸ್ಥಿತಿಯಲ್ಲಿ ಸಂಗೀತ ಸಾಮ್ರಾಜ್ಞಿ ಡಾ.ಗಂಗೂಬಾಯಿ ಹಾನಗಲ್ ನಿವಾಸ: ನವೀಕರಣಕ್ಕೆ ಸರ್ಕಾರಕ್ಕೆ ಆಗ್ರಹ ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ ಡಾ.ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದೆ.

ಸಂಗೀತ ಸಾಮ್ರಾಜ್ಞಿ ದಿವಂಗತ ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದ್ದು ಸರ್ಕಾರ ಕೂಡಲೇ ಗಮನ ಹರಿಸಬೇಕೆಂಬ ಕೂಗು ಬಹಳ ವರ್ಷಗಳ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಧಾರವಾಡದ, ಹೊಸ ಯಲ್ಲಾಪುರ ರಸ್ತೆಯಲ್ಲಿರುವ ಹಿಂದೂಸ್ಥಾನಿ ಸಂಗೀತದ ಗಾನಸಾಮ್ರಾಜ್ಞಿ, ಸಂಗೀತ ಶಿರೋಮಣಿ, ಸಂಗೀತ ಕಲಾರತ್ನ, ಪದ್ಮವಿಭೂಷಣ ಪುರಸ್ಕೃತ ಡಾ.ಗಂಗೂಬಾಯಿ ಹಾನಗಲ್ ಅವರ ನಿವಾಸ ಶಿಥಿಲಗೊಂಡಿದೆ.”

ಈ ಹಿಂದೆ ಸರ್ಕಾರ ಅವರ ನಿವಾಸವನ್ನು ಸ್ಮಾರಕವನ್ನಾಗಿ ಮಾಡಲು ಹಣ ಬಿಡುಗಡೆ ಮಾಡಿದರೂ ಸಹ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ, ಸರ್ಕಾರಗಳ ನಿರ್ಲಕ್ಷ್ಯದಿಂದ ಈ ಮಟ್ಟಕ್ಕೆ ತಲುಪಿರುವುದು ಶೋಚನೀಯ ಸಂಗತಿ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ.



ಸ್ಮಾರಕ ಕಟ್ಟಡವು ಹತ್ತೇ ವರ್ಷದಲ್ಲಿ ಪಾಳು ಬಿದ್ದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ, ಕನ್ನಡ & ಸಂಸ್ಕೃತಿ ಇಲಾಖೆಯ ಅಸಡ್ಡೆಗೆ ಹಿಡಿದ ಕೈಗನ್ನಡಿ. ಸಂಗೀತ ಕ್ಷೇತ್ರದ ಬೆಳವಣಿಗೆಗೆ ಇಡೀ ತಮ್ಮ ಜೀವನದುದ್ದಕ್ಕೂ ಸೇವೆಯನ್ನು ಸಲ್ಲಿಸಿ ನಮ್ಮ ನಾಡು ಹಾಗೂ ದೇಶದ ಕೀರ್ತಿಯನ್ನು ವಿಶ್ವವ್ಯಾಪಿ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗವ್ವರವರ ನಿವಾಸವನ್ನು ಸಂಪೂರ್ಣವಾಗಿ ನವೀಕರಿಸಿ ಅವರಿಗೆ ಗೌರವ ಸಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...