ಆರೋಗ್ಯ ಸಂಶೋಧನೆಯಲ್ಲಿ ಮಹತ್ವದ ಹೆಜ್ಜೆಯಾಗಿ 4ನೇ ರಾಷ್ಟ್ರೀಯ ತಂಬಾಕು ಪರೀಕ್ಷಾ ಪ್ರಯೋಗಾಲಯವನ್ನು ನಿಮ್ಹಾನ್ಸ್‌ನಲ್ಲಿ ಉದ್ಘಾಟನೆ

38

ದೇಶದ 4ನೇ ರಾಷ್ಟ್ರೀಯ ತಂಬಾಕು ಪರೀಕ್ಷಾ ಪ್ರಯೋಗಾಲಯ ನಿಮ್ಹಾನ್ಸ್‌ನಲ್ಲಿ ಉದ್ಘಾಟನೆ ಇದು ಪುರಾವೆ ಆಧಾರಿತ ತಂಬಾಕು ನಿಯಂತ್ರಣಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಮತ್ತು ಭಾರತದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯದ ಹೊರೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತದೆ.

ಭಾರತದಲ್ಲಿ ಸದ್ಯ ಮೂರು ರಾಷ್ಟ್ರೀಯ ತಂಬಾಕು ಪರೀಕ್ಷಾ ಪ್ರಯೋಗಾಲಯಗಳು ಇದ್ದು, ನೋಯ್ಡಾದ ರಾಷ್ಟ್ರೀಯ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (NICPR) ಒಂದು ಅತ್ಯುನ್ನತ ಪ್ರಯೋಗಾಲಯ, ಮುಂಬೈನ ಕೇಂದ್ರ ಔಷಧ ಪರೀಕ್ಷಾ ಪ್ರಯೋಗಾಲಯ (CDTL) ಮತ್ತು ಗುವಾಹಟಿಯಲ್ಲಿರುವ ಪ್ರಾದೇಶಿಕ ಔಷಧ ಪರೀಕ್ಷಾ ಪ್ರಯೋಗಾಲಯ (RDTL) ಸೇರಿದಂತೆ ಎರಡು ಪ್ರಾದೇಶಿಕ ಪ್ರಯೋಗಾಲಯಗಳಿವೆ.

ನಿಮ್ಹಾನ್ಸ್‌ನಲ್ಲಿ ಉದ್ಘಾಟನೆಗೊಂಡಿರುವ ಹೊಸ ಪ್ರಯೋಗಾಲಯವು, ತಂಬಾಕು ಉತ್ಪನ್ನಗಳಲ್ಲಿನ ರಾಸಾಯನಿಕ ಅಂಶ ಮತ್ತು ವಿಷಕಾರಿ ವಸ್ತುಗಳನ್ನು ಪರೀಕ್ಷೆ ಮತ್ತು ವಿಶ್ಲೇಷಣೆ ನಡೆಸಲಿದೆ. ಅಲ್ಲದೆ ಇದು ಪರೀಕ್ಷೆಗೆ ಭಾರತೀಯ ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸಲಿದ್ದು, ತಂಬಾಕು ನಿಯಂತ್ರಣ ಕಾನೂನುಗಳು ಮತ್ತು ನಿಯಮಗಳನ್ನು ಜಾರಿಗೊಳಿಸುವುದು ಮತ್ತು ತಂಬಾಕು ಉತ್ಪನ್ನಗಳನ್ನು ಮೌಲ್ಯಮಾಪನ ಮಾಡಲು ವೈಜ್ಞಾನಿಕ ಡೇಟಾವನ್ನು ಒದಗಿಸುತ್ತದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

‘ತಂಬಾಕು ನಿಯಂತ್ರಣ ಕ್ರಮಗಳನ್ನು ಬಲಪಡಿಸಲು ಮತ್ತು ತಂಬಾಕಿನಲ್ಲಿರುವ ಹಾನಿಕಾರಕ ಪದಾರ್ಥಗಳನ್ನು ಮೇಲ್ವಿಚಾರಣೆ ಮಾಡಲು ಸಂಶೋಧನಾ ಸಾಮರ್ಥ್ಯಗಳನ್ನು ಹೆಚ್ಚಿಸುವ ಸಲುವಾಗಿ ಈ ಪ್ರಯೋಗಾಲಯ ಸ್ಥಾಪನೆಯಾಗಿದೆ’ ಎಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಹೇಳಿದೆ. ತಂಬಾಕು ಖರೀದಿಗೆ ಕಾನೂನುಬದ್ಧ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ; ಹುಕ್ಕಾ ಬಾರ್‌ಗಳಿಗೆ ನಿಷೇಧ, ದಂಡ ಹೆಚ್ಚಳ!

ಸಂಸ್ಥೆಯ ಪ್ರಕಾರ, ನಿಮ್ಹಾನ್ಸ್‌ನಲ್ಲಿ ಈ ಸೌಲಭ್ಯದ ಸ್ಥಾಪನೆಯು ಅತ್ಯಾಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಶ್ರೇಷ್ಠತೆಯ ಮೂಲಕ ಆರೋಗ್ಯ ಸಂಶೋಧನೆ ಮತ್ತು ಸಾರ್ವಜನಿಕ ಆರೋಗ್ಯ ನೀತಿಯನ್ನು ಮುನ್ನಡೆಸುವ ತನ್ನ ಬದ್ಧತೆಯನ್ನು ಬಲಪಡಿಸುತ್ತದೆ. ‘ಈ ಉಪಕ್ರಮವು ಪುರಾವೆ ಆಧಾರಿತ ತಂಬಾಕು ನಿಯಂತ್ರಣಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಮತ್ತು ಭಾರತದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯದ ಹೊರೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತದೆ’ ಎಂದು ಅದು ಹೇಳಿದೆ.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....